Advertisement

ಗಣಿ ಅಕ್ರಮ: ಜೆಎಸ್‌ಡಬ್ಲ್ಯೂ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

08:49 PM Jun 24, 2022 | Team Udayavani |

ಬೆಂಗಳೂರು: ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್‌ ಕಂಪೆನಿಯೊಂದಿಗೆ ಅಕ್ರಮ ಹಣ ವರ್ಗಾವಣೆ ವ್ಯವಹಾರ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ವಿಶೇಷ ಕೋರ್ಟ್‌ನಲ್ಲಿ ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಜೆಎಸ್‌ಡಬ್ಲ್ಯೂ ಕಂಪೆನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಕಂಪೆನಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 2022ರ ಎಪ್ರಿಲ್‌ 11ರಂದು ವಿಶೇಷ ಕೋರ್ಟ್‌ ಕಂಪೆನಿ ವಿರುದ್ಧದ ಸಮನ್ಸ್‌ ಜಾರಿಗೊಳಿಸಿರುವ ಆದೇಶವು ವಿಚಾರಣ ನ್ಯಾಯಾಲಯದ ವಿವೇಚನೆ ಆಧರಿಸಿದೆ ಮತ್ತು ಸುಪ್ರೀಂಕೋರ್ಟ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನೀಡಿರುವ ಆದೇಶಗಳಿಗೆ ಅನುಗುಣವಾಗಿದೆ ಎಂದು ಹೇಳಿದೆ.

ಇದನ್ನೂ ಓದಿ:ವೊಡಾಫೋನ್‌- ಐಡಿಯಾ ಕಂಪನಿಯ ಶೇ.33ರಷ್ಟು ಷೇರುಗಳನ್ನುಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನ

Advertisement

Udayavani is now on Telegram. Click here to join our channel and stay updated with the latest news.

Next