Advertisement

ಡೀಲ್ ಪ್ರಕರಣ; ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ಮಂಜೂರು

05:09 PM Nov 14, 2018 | Sharanya Alva |

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಮಾಲೀಕ ಸೈಯದ್ ಅಹಮದ್ ಫರೀದ್ ನಿಂದ 57ಕೆಜಿ ಚಿನ್ನದ ಗಟ್ಟಿ ಪಡೆದುಕೊಂಡ ಆರೋಪದ ಪ್ರಕರಣದಲ್ಲಿ ಜೈಲು ಸೇರಿದ್ದ ಗಾಲಿ ಜನಾರ್ದನ ರೆಡ್ಡಿಗೆ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ತೀರ್ಪನ್ನು ಪ್ರಕಟಿಸಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಜಾಮೀನು ಕೋರಿ 1ನೇ ಎಸಿಎಂಎಂ ನ್ಯಾಯಾಲಯದ ಮೊರೆ ಹೋಗಿದ್ದರು. ರೆಡ್ಡಿ ಪರ ವಕೀಲರ ವಾದ ಹಾಗೂ ಸಿಸಿಬಿ ಪರ ವಕೀಲರ ಪ್ರತಿವಾದ ಆಲಿಸಿ ಜಾಮೀನು ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿತ್ತು.

ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂಪಾಯಿ ಬಾಂಡ್ ಆಧಾರದ ಮೇಲೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ನಾಲ್ಕು ದಿನಗಳ ಜೈಲುವಾಸ ಅಂತ್ಯ ಕಂಡಂತಾಗಿದೆ. ಕೋಲಾರ ಜಿಲ್ಲೆ ಮಾಲೂರು ಮೂಲದ ರಘುರಾಮ ರೆಡ್ಡಿ ಮತ್ತು ನಂಜುಂಡ ರೆಡ್ಡಿ ಎಂಬವರು ಶ್ಯೂರಿಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next