Advertisement

ಹಿರೀಕಾಟಿ ಕ್ವಾರಿಯಲ್ಲಿ ಟ್ರ್ಯಾಕ್ಟರ್ ಮಗುಚಿ ಕಾರ್ಮಿಕ ಸಾವು

09:13 AM Apr 07, 2022 | Team Udayavani |

ಗುಂಡ್ಲುಪೇಟೆ: ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು, ಬೇಗೂರು ಸಮೀಪದ ಹಿರೀಕಾಟಿ ಕ್ವಾರಿಯಲ್ಲಿ ಟ್ರ್ಯಾಕ್ಟರ್ ಮಗುಚಿ ಕಾರ್ಮಿಕನೋರ್ವ ಸಾವನ್ನಪ್ಪಿದ್ದಾನೆ.

Advertisement

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಸೇಸುರಾಜು(47) ಮೃತ ವ್ಯಕ್ತಿಯಾಗಿದ್ದು, ಟ್ರ್ಯಾಕ್ಟರ್ ನಲ್ಲಿ ಕ್ವಾರಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಬುಧವಾರ ಸಂಜೆ ನಡೆದಿರುವ ಹಿನ್ನೆಲೆಯಲ್ಲಿ ಗಾಯಾಳುವನ್ನು ಕ್ವಾರಿ ಮಾಲೀಕರು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ವ್ಯಕ್ತಿ ಟ್ರ್ಯಾಕ್ಟರ್ ಮಗುಚಿಯೋ ಅಥವಾ ಕ್ವಾರಿಯ ಕಲ್ಲು ಕುಸಿದು ಸಾವನ್ನಪ್ಪಿದ್ದಾನೋ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಇದು ತನಿಖೆಯ ನಂತರವಷ್ಟೆ ಹೊರಬರಬೇಕಿದೆ. ಕ್ವಾರಿಯು ಗೀತಾ ಗಣೇಶ್ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next