Advertisement

ಬಿಎಸ್‌ವೈ ಮಾಜಿ ಸಿಎಂ ಎನ್ನಲು ಮನಸ್ಸು ಒಪ್ಪುತ್ತಿಲ್ಲ : ಸಚಿವ ಆನಂದ ಸಿಂಗ್‌

12:57 PM Aug 07, 2021 | Team Udayavani |

ಹೊಸಪೇಟೆ: ಬಿ.ಎಸ್‌.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯಲು ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದು ಸಚಿವ ಆನಂದ ಸಿಂಗ್‌ ಹೇಳಿದರು.

Advertisement

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶುಕ್ರವಾರ ತವರಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಿರಿಯ, ಮುತ್ಸದ್ಧಿ ನಾಯಕರು. ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಬೆಳಸಿದವರು. ಸರ್ಕಾರಕ್ಕೆ ಅವರ ಮಾರ್ಗದರ್ಶನ ಇದ್ದೆ ಇರುತ್ತದೆ. ಅಂದ ಮಾತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಕೈಗೊಂಬೆ ಎಂದು ಹೇಳಲು ಸಾಧ್ಯವಿಲ್ಲ. ರಾಜ್ಯ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತ ಪ್ರಮುಖ ಖಾತೆಯನ್ನು ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಲಾಗಿದೆ ಎಂದರು.

ಗಣೇಶ ಚತುರ್ಥಿ ಯಂದು ನೂತನ ವಿಜಯನಗರ ಜಿಲ್ಲೆ ಉದ್ಘಾಟನೆಗೆ ಚಿಂತನೆ ನಡೆದಿದೆ. ಸಿಎಂ ಸೇರಿದಂತೆ ಗಣ್ಯರನ್ನು ಆಹ್ವಾನಿಸಲಾಗುವುದು. ಕೊರೊನಾ ಮೂರನೇ ಅಲೆ ಭೀತಿ ಕಾಡುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next