Advertisement

ಕಸದ ಸಮಸ್ಯೆಗೆ ಎಂಆರ್‌ಎಫ್ ಘಟಕ ಸೂಕ್ತ ಪರಿಹಾರ: ಅಂಗಾರ

11:43 PM Jan 25, 2023 | Team Udayavani |

ಮಣಿಪಾಲ: ಗ್ರಾಮ ಪಂಚಾಯತ್‌ ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್‌.ಎಫ್. ಘಟಕಗಳು ಸೂಕ್ತ ಪರಿಹಾರ ನೀಡಬಲ್ಲವು ಎಂದು ಮೀನುಗಾರಿಕೆ ಸಚಿವ ಎಸ್‌. ಅಂಗಾರ ಹೇಳಿದರು.

Advertisement

80 ಬಡಗಬೆಟ್ಟು ಗ್ರಾ.ಪಂ.ನ ನೇತಾಜಿ ನಗರ ಮಿನಿ ಎಂಆರ್‌ಎಫ್ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿ.ಪಂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ತಾ.ಪಂ. ಹಾಗೂ 80 ಬಡಗಬೆಟ್ಟು ಗ್ರಾ.ಪಂ.ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವತ್ಛ ಭಾರತ್‌ ಮಿಷನ್‌ (ಗ್ರಾಮೀಣ) ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರ್ಮಾಣವಾದ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ ಘಟಕ, ಮಲತ್ಯಾಜ್ಯ ನಿರ್ವಹಣೆ ಘಟಕ, ಬೂದು ನೀರು ನಿರ್ವಹಣೆ ಕಾಮಗಾರಿ ಹಾಗೂ ಶಾಂತಿ ನಗರದಲ್ಲಿ ನಿರ್ಮಾಣವಾದ ಸುಸಜ್ಜಿತ ಮೀನು ಮಾರುಕಟ್ಟೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇಚ್ಛಾಶಕ್ತಿ ಇದ್ದರೆ ಕಸವನ್ನು ಸಹ ಆದಾಯದ ಮೂಲವನ್ನಾಗಿ ಮಾಡಬಹುದು ಎಂಬುದಕ್ಕೆ ಎಂಆರ್‌ಎಫ್ ಘಟಕಗಳೇ ಸಾಕ್ಷಿಯಾಗಿವೆ. ಎಲ್ಲ ಪಂಚಾಯತ್‌ಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಬೇಕು ಎಂದರು.

ಶಾಸಕ ಲಾಲಾಜಿ ಆರ್‌. ಮೆಂಡನ್‌ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಮಾಧವಿ ಎಸ್‌. ಆಚಾರ್ಯ, ಉಪಾಧ್ಯಕ್ಷೆ ನಿರುಪಮಾ ಹೆಗ್ಡೆ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್‌, ಜಿ.ಪಂ. ಯೋಜನ ನಿರ್ದೇಶಕ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್‌ ಡಿ’ಸೋಜಾ, ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಾ.ಪಂ. ಇಒ ವಿಜಯಾ, ಪಿಡಿಒ ಅಶೋಕ್‌, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಸ್ವಾಗತಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next