Advertisement

ಸಚಿವ ಆಂಜನೇಯ ಅಸ್ವಸ್ಥ: ಆಸ್ಪತ್ರೆಗೆ ದಾಖಲು

07:05 AM May 06, 2018 | |

ದಾವಣಗೆರೆ: ಸಮಾಜ ಕಲ್ಯಾಣ ಸಚಿವ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಚ್‌. ಆಂಜನೇಯ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೇ ಮಧುಮೇಹ ಸಮಸ್ಯೆಯಿಂದ ಅಸ್ವಸ್ಥಗೊಂಡು ನಗರದ ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಶನಿವಾರ ತಮ್ಮ ಕ್ಷೇತ್ರ ಇಸಾಮುದ್ರ ಗ್ರಾಮದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವ ವೇಳೆ ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿದೆ. ಇದರಿಂದ ಸಚಿವ ಆಂಜನೇಯ ತೀವ್ರ ಅಸ್ವಸ್ಥಗೊಂಡರು. ತಕ್ಷಣ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಗರದ ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಗೆ ಕರೆತರಲಾಯಿತು.

ಸಚಿವ ಆಂಜನೇಯವರ ಆರೋಗ್ಯ ಕುರಿತು ಮಾಹಿತಿ ನೀಡಿರುವ ಎಸ್‌.ಎಸ್‌. ನಾರಾಯಣ ಹೃದಯಾಲಯದ ವೈದ್ಯ ಶ್ರೀನಿವಾಸ್‌, ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಸಚಿವರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ. 24 ತಾಸುಗಳ ಕಾಲ ಅವರನ್ನು ನಿಗಾದಲ್ಲಿ ಇಡಲಾಗುವುದು. ಅವರಿಗೆ ತೆರೆದ ಹೃದಯದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 24 ಗಂಟೆ ನಂತರ ಅವರಿಗೆ ಚಿಕಿತ್ಸೆ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next