Advertisement

ಅಂಬೇಡ್ಕರ್‌ ಆವಾಜ್‌ ಯೋಜನೆ ಅನುಷ್ಠಾನಕ್ಕೆ ಸಚಿವರಿಗೆ ಮನವಿ

12:27 PM Apr 17, 2022 | Team Udayavani |

ಕೋಟ: ರಾಜ್ಯ ಸರಕಾರ ಜಾರಿಗೆ ತಂದ ಅಂಬೇಡ್ಕರ್‌ ಆವಾಜ್‌ ಯೋಜನೆ ಸಮರ್ಪಕವಾಗಿ ಅನಿಷ್ಠಾನವಾಗದ ಕಾರಣ ದಲಿತರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಆದ್ದರಿಂದ ಇದರ ಅನುಷ್ಠಾನಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಸಮತಾ ಸೈನಿಕ ದಳ ಸಂಘಟನೆಯ ಸದಸ್ಯರು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಿದರು.

Advertisement

ಮನೆಗಳ ನಿರ್ಮಾಣಕ್ಕೆ ಸರಕಾರ ನೂರಾರು ಯೋಜನೆಗಳನ್ನು ಜಾರಿಗೆ ತಂದರೂ ಕೂಡ ಇನ್ನೂ ಮನೆಗಳಿಲ್ಲದೆ ಸಾವಿರಾರು ದಲಿತ ಕುಟುಂಬಗಳು ಟಾರ್ಪಲು, ಮುಳಿಹುಲ್ಲು ಹಾಗೂ ಗುಡಿಸಲಿನಲ್ಲಿ ಹಿನಾಯ ಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರೇ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭ ಘೋಷಿಸಿದ ಅಂಬೇಡ್ಕರ್‌ ಆವಾಜ್‌ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಿ ಹಿಂದುಳಿದ ವರ್ಗಗಳು, ದಲಿತರು ಮನೆ ನಿರ್ಮಿಸಿಕೊಳ್ಳಲು ನೆರವಾಗಬೇಕು ಎಂದು ಮನವಿಯಲ್ಲಿ ವಿನಂತಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ, ಜಿಲ್ಲಾ ಕಾರ್ಯದರ್ಶಿ ವಿಘ್ನೇಶ್‌ ಬ್ರಹ್ಮಾವರ, ಭೀಮ್‌ ಆರ್ಮಿ ಸಂಘಟನೆಯ ಪ್ರಕಾಶ್‌ ಹೇರೂರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಶಿರಿಯಾರ, ಜಿಲ್ಲಾ ಖಜಾಂಚಿ ಮಂಜುನಾಥ ಮಧುವನ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next