Advertisement

ಸುಯಮೀಂದ್ರ ಆಚಾರ್ಯ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ

09:38 PM Apr 30, 2021 | Team Udayavani |

ಬೆಂಗಳೂರು: ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರ ನಿಧನಕ್ಕೆ ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Advertisement

ಸುಯಮೀಂದ್ರ ಆಚಾರ್  ಅವರು ಇಂದು ಸಾಯಂಕಾಲ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಸಾವಿನ ಸುದ್ದಿ ನನಗೆ ಆಘಾತ ಉಂಟುಮಾಡಿದೆ, ಸುಯಮೀಂದ್ರ ಆಚಾರ್ಯರು ಬಿ ಎಂ ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನನ್ನ ಸಹಪಾಠಿಯಾಗಿದ್ದರು. ಸರಳ, ಸಜ್ಜನಿಕೆಯ ಸುಯಮೀಂದ್ರ ಆಚಾರ್ಯರು ದೆಹಲಿಯಲ್ಲಿ ಕೋವಿಡ್‍ಗೆ ಬಲಿಯಾಗಿರುವುದು ನಿಜಕ್ಕೂ ದುರದೃಷ್ಟಕರ.

ಅವರ ನಿಧನದಿಂದ ನಾನು ಸಹೃದಯಿ ಮಿತ್ರನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬ ವರ್ಗಕ್ಕೆ ಮತ್ತು ಅವರ ಮಿತ್ರವೃಂದಕ್ಕೆ ಅವರ ಅಗಲಿಕೆಯಿಂದ ಉಂಟಾದ ನೋವನ್ನು ಭರಿಸುವ ಶಕ್ತಿಯನ್ನು ಶ್ರೀ ರಾಘವೇಂದ್ರ ಸ್ವಾಮಿಗಳು ಕರುಣಿಸಲಿ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next