Advertisement

ಬ್ರಹ್ಮಗಿರಿ ಬೆಟ್ಟ ದುರಂತ: ಮುಂದುವರಿದ ಶೋಧ ಕಾರ್ಯ, ಸ್ಥಳಕ್ಕೆ ಸಚಿವರ ಭೇಟಿ

03:47 PM Aug 09, 2020 | keerthan |

ಮಡಿಕೇರಿ: ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿದು ಮಣ್ನುಪಾಲಾದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲು ಶೋಧ ಕಾರ್ಯ ಮುಂದುವರಿದಿದೆ. ಮಳೆಯ ನಡುವೆಯೇ ಕಾರ್ಯಾಚರಣೆ ಮುಂದುವರಿದಿದೆ.

Advertisement

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್.ಅಶೋಕ್ ಅವರು ತಲಕಾವೇರಿ ಬಳಿ ಭೂ ಕುಸಿತ ಉಂಟಾಗಿರುವ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ವಿಳಂಬವಾಗದಂತೆ ನಾಳೆಯೊಳಗೆ ಕಾರ್ಯಾಚರಣೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ನಾಳೆ ಸೇನಾ ಪಡೆಯ ರಕ್ಷಣಾ ತಂಡ ಕೂಡ ತಲಕಾವೇರಿಯಲ್ಲಿ ಕಾರ್ಯಾಚರಣೆಗೆ ಬರಲಿದೆ.

ಮಳೆ ಹಾನಿ ಪರಿಹಾರದಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ವಾಸ್ತವಾಂಶ ತಿಳಿಯದೇ ಸುಮ್ಮನೆ ಆರೋಪ ಮಾಡಬಾರದು ಎಂದರು.

Advertisement

ಗುರುವಾರ ಬ್ರಹ್ಮಗಿರಿ ಬೆಟ್ಟ ಕುಸಿದು ಐವರು ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿದ್ದರು. ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು ಎನ್ ಡಿಆರ್ ಎಫ್ ತಂಡ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಮಾಡುತ್ತಿದೆ. ಶನಿವಾರ ಸಂಜೆ ಒಂದು ಮೃತದೇಹ ಪತ್ತೆಯಾಗಿದ್ದು, ಇನ್ನೂ ನಾಲ್ಕು ಮೃತದೇಹಗಳ ಪತ್ತೆಯಾಗಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next