Advertisement

ಪುನೀತ್ ಸ್ಮರಣೆ: ಅನ್ನಸಂತರ್ಪಣೆಯಲ್ಲಿ ಭಾಗಿಯಾದ ಸಚಿವ ಅಶ್ವತ್ಥನಾರಾಯಣ

02:02 PM Nov 08, 2021 | Team Udayavani |

ಬೆಂಗಳೂರು: ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ 11ನೇ ದಿನದ ಪುಣ್ಯತಿಥಿಯ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆಗಳಲ್ಲಿ ಸೋಮವಾರ ನಡೆದ ಶ್ರದ್ಧಾಂಜಲಿ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು.

Advertisement

ಯಶವಂತಪುರ ಬಸ್ ನಿಲ್ದಾಣದ ಎದುರಿನ ಸಂವಿಧಾನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಪಾಲ್ಗೊಂಡ ಸಚಿವರು, ಪುನೀತ್ ಭಾವಚಿತ್ರಕ್ಕೆ ಗೌರವ ನಮನಗಳನ್ನು ಸಲ್ಲಿಸಿ, ಪುಷ್ಪಾಂಜಲಿಯನ್ನು ಸಮರ್ಪಿಸಿದರು.

ಬಳಿಕ ಅವರು, ಪುಣ್ಯತಿಥಿಯಲ್ಲಿ ಪಾಲ್ಗೊಂಡಿದ್ದ ಪುನೀತ್ ಅವರ ಸಾವಿರಾರು ಅಭಿಮಾನಿಗಳಿಗೆ ಖುದ್ದಾಗಿ ನಿಂತು ಅನ್ನಸಂತರ್ಪಣೆಯನ್ನು ವಿತರಿಸಿದರು. ಚಿತ್ರ ನಿರ್ಮಾಪಕರಾದ ಸುರೇಶ್ ಗೌಡ ಮತ್ತು ಬಿಜೆಪಿ ಮುಖಂಡ ವೈರಮುಡಿ, ಚೌಧರಿ ಅವರು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.

ನಂತರ ಸಚಿವರು, ಮಲ್ಲೇಶ್ವರಂನ ವೈಯಾಲಿಕಾವಲ್ ಜಂಕ್ಷನ್ನಿನ 10ನೇ ಅಡ್ಡರಸ್ತೆಯಲ್ಲಿ ನಡೆದ ಪುನೀತ್ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕೂಡ ಪಾಲ್ಗೊಂಡು, ಅಗಲಿದ ನಟನಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು. ಇಲ್ಲೂ ಸಹ ಬಿಜೆಪಿ ಮುಖಂಡ ವೆಂಕಟೇಶ ಅವರು ಸಾರ್ವಜನಿಕ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next