Advertisement

ಸಂಗೊಳ್ಳಿ ರಾಯಣ್ಣ, ಶಿವಾಜಿ ಪ್ರತಿಮೆ ಹಾನಿಗೆ ಸಚಿವರ ಖಂಡನೆ, ಕಾನೂನು ಕ್ರಮದ ಎಚ್ಚರಿಕೆ

01:58 PM Dec 18, 2021 | Team Udayavani |

ಬೆಳಗಾವಿ: ಕನ್ನಡಿಗರು ಮತ್ತು ಮರಾಠಿ ಭಾಷಿಕರ ಸೌಹಾರ್ದ ಸಂಬಂಧಕ್ಕೆ ಹುಳಿ ಹಿಂಡುವ ಉದ್ದೇಶದಿಂದ ಕಿಡಿಗೇಡಿಗಳು ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಅಗೌರವ ತೋರಿಸಿರುವುದು ಖಂಡನೀಯ ಕೃತ್ಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

Advertisement

ರಾಜ್ಯದಲ್ಲಿರುವ ಎಲ್ಲ ಭಾಷೆಗಳ ಜನರೂ ಸೌಹಾರ್ದದಿಂದ ಇದ್ದು, ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಗಡಿ ಭಾಗವಾದ ಬೆಳಗಾವಿ ಜಿಲ್ಲೆ ಇದಕ್ಕೆ ಹೊರತೇನೂ ಆಗಿಲ್ಲ. ನಾವು ರಾಯಣ್ಣನನ್ನು ಗೌರವಿಸುವಂತೆಯೇ ಶಿವಾಜಿಯನ್ನೂ ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್ ಗಡಿಯಲ್ಲಿ ಚೀನಾ ನಿರ್ಮಿತ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಪಟ್ಟಭದ್ರ ಹಿತಾಸಕ್ತಿಗಳು ಬೀದಿಗೆ ಇಳಿದಿದ್ದು, ಸರಕಾರ ಇದನ್ನು ಸಹಿಸುವುದಿಲ್ಲ. ಇಂತಹ ಶಕ್ತಿಗಳ ವಿರುದ್ಧ ತೀಕ್ಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜನತೆ ವಿಚಲಿತರಾಗದೆ ಎಂದಿನಂತೆ ಶಾಂತಿ ಮತ್ತು ಸೌಹಾರ್ದಗಳನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next