Advertisement

ಭ್ರಷ್ಟಾಚಾರ ಆರೋಪದ ತನಿಖೆಗೆ ಸಿದ್ಧ : ಸಚಿವ ಬಿ.ಸಿ.ಪಾಟೀಲ್

02:19 PM Sep 11, 2021 | Team Udayavani |

ಚಿತ್ರದುರ್ಗ:  ನನ್ನ ವಿರುದ್ದದ ಭ್ರಷ್ಟಾಚಾರ ದೂರು ದುರುದ್ದೇಶ ಪೂರಿತ. ಈ ಆರೋಪದ ಬಗ್ಗೆ ಯಾವುದೇ ತನಿಖೆಗೆ ನಾನು ಸಿದ್ಧ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

Advertisement

ನಗರದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಸಿಲ್ವರ್ ಬ್ರಿಡ್ಜ್ ನಿರ್ಮಾಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದ  ಆರೋಪವಿತ್ತು ಎಂದರು.

ಮಧ್ಯವರ್ತಿ, ಏಜೆಂಟ್ ರನ್ನು ದೂರವಿಟ್ಟಾಗ ಆರೋಪ ಕೇಳಿ ಬರುತ್ತವೆ. ಕೃಷಿ ಇಲಾಖೆ ಒಂದೇ ಸಂಪೂರ್ಣ ಪಾರದರ್ಶಕವಾಗಿದೆ ಎಂದರು.

ಕಾಂಗ್ರೆಸ್ ಜನವಿರೋಧಿ ಆಗಿದ್ದಕ್ಕೆ ಜನರಿಂದ ತಿರಸ್ಕಾರ. ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವಕಾಶವಿಲ್ಲ ಎಂದು ಕಿಡಿ ಕಾರಿದರು.

21 ದಿನ ಗಣೇಶೋತ್ಸವ ಆಚರಣೆಗೆ ಸಂಘ ಪರಿವಾರ ಪಟ್ಟು ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಗಣೇಶೋತ್ಸವ‌ 2ನೇ ದಿನ ನಡೆಯುತ್ತಿದ್ದು ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಉಡುಪಿಯಲ್ಲಿ ಮತಾಂತರ ಪ್ರಕರಣದ ಬಗ್ಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಇದೆ ವೇಳೆ ತಿಳಿಸಿದರು.

Advertisement

ಹಿರಿಯೂರು ಕ್ಷೇತ್ರದತ್ತ ಹಚ್ಚು ಒಲವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕ್ಷೇತ್ರದ ಶಾಸಕಿ ಪೂರ್ಣಿಮಾ ಆಹ್ವಾನದ ಮೇರೆಗೆ ಆಗಮಿಸಿದ್ದೇನೆ. ಹಿರಿಯೂರಲ್ಲಿ ಹಿಂದೆ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸಿದ್ದೆನು. ಹಿರಿಯೂರು ಜನರ ಮೇಲೆ ನನಗೆ ಪ್ರೀತಿ ಜಾಸ್ತಿ ಇದೆ. ನನಗೆ  ನಾಲ್ಕು ಬಾರಿ ಗೆಲ್ಲಿಸಿದ ಹಿರಿಕೇರೂರು ಕ್ಷೇತ್ರ ಭದ್ರವಾಗಿದೆ ಸಾಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next