Advertisement

ಸಚಿವ ಕೆ.ಎಸ್.ಈಶ್ವರಪ್ಪ ಬಗ್ಗೆ ಬೇಸರ ವ್ಯಕ್ತಪಡಿಸಿದ ಕೃಷಿ ಸಚಿವ ಬಿ‌.ಸಿ.ಪಾಟೀಲ್

01:56 PM Apr 01, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಿರಿಯ ಸಚಿವರಾದ ಕೆ ಎಸ್ ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಬಿ.ಸಿ.ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ.ಯಾವುದೇ ತಪ್ಪನ್ನು ಮಾಡದ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next