Advertisement

ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಮಾತೃ ವಿಯೋಗ

01:10 PM Aug 21, 2020 | keerthan |

ಬಳ್ಳಾರಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಮಾತೃ ವಿಯೋಗವಾಗಿದೆ.

Advertisement

ಸಚಿವ ರಾಮುಲು ಅವರ ತಾಯಿ ಹೊನ್ನೂರಮ್ಮ ಶುಕ್ರವಾರ ಬೆಳಗಿನ ಜಾವ 2 ಗಂಟೆಗೆ ನಿಧನರಾಗಿದ್ದು, ಬೆಳಗ್ಗೆ 7 ಗಂಟೆಗೆ ನಗರದ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಸಚಿವ ರಾಮುಲು ತಾಯಿ ಹೊನ್ನೂರಮ್ಮ ಅವರಿಗೆ ಈಚೆಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಎರಡು ದಿನಗಳ ಹಿಂದಷ್ಟೇ ಬಳ್ಳಾರಿಗೆ ಬಂದಿದ್ದರು. ಆದರೆ, ಗುರುವಾರ ರಾತ್ರಿ ಆರೋಗ್ಯದಲ್ಲಿ ಪುನಃ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next