Advertisement

“ಖಾಸಗಿ ಆಸ್ಪತ್ರೆ ,ಕ್ಲಿನಿಕ್ ಮುಚ್ಚಿದರೆ ಲೈಸೆನ್ಸ್ ರದ್ದು, ಕ್ರಿಮಿನಲ್ ಕೇಸ್”

09:07 AM Apr 06, 2020 | keerthan |

ರಾಯಚೂರು: ಕೊವಿಡ್-19 ವೈರಸ್ ವಿರುದ್ಧ ಇಡೀ ದೆಶವೇ ಹೋರಾಡುತ್ತಿದ್ದು ಇಂಥ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆ ಹಾಗು ಕ್ಲಿನಿಕ್ ಗಳನ್ನು ಮುಚ್ಚಿದರೆ, ಅವರ ಪರವಾನಗಿ ರದ್ದುಗೊಳಿಸಿ ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ  ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಸಿದರು.

Advertisement

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರವಿವಾರ ಕೊವಿಡ್ 19 ನಿಯಂತ್ರಣ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಬಂದ್ ಆಗಿರುವ ಆಸ್ಪತ್ರೆಗಳ ವಿರುದ್ದ ಪ್ರಕರಣ ದಾಖಲಿಸಬೇಕು. ಆಸ್ಪತ್ರೆಯ ಲೈಸೆನ್ಸ್ ಕೂಡ ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಕೂಡಲೇ ಸೂಚನೆ ನೀಡಬೇಕು. ಈ ಮೊದಲೇ ಮಾಹಿತಿ ನೀಡಿ ಎಚ್ಚರಿಸಿದ್ದರೂ ಸೇವೆ ಸ್ಥಗಿತಗೊಳಿಸಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next