Advertisement

ಹೊಗೆ ಶೂನ್ಯತೆಗಾಗಿ ಶ್ರಮಿಸೋಣ: ಜಿ-7 ರಾಷ್ಟ್ರಗಳ ಸಭೆಯಲ್ಲಿ ಸಚಿವ ಭೂಪೇಂದ್ರ ಯಾದವ್‌

08:52 PM Apr 15, 2023 | Team Udayavani |

ನವದೆಹಲಿ: ಜಾಗತಿಕ ಹವಾಮಾನ ಬದಲಾವಣೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹೊರಸೂಸುವಿಕೆ ಕಡಿತಗೊಳಿಸುವ ಪ್ರಯತ್ನಗಳನ್ನು ಹೆಚ್ಚಿಸುವಂತೆ ಮುಂದುವರಿದ ರಾಷ್ಟ್ರಗಳಿಗೆ ಭಾರತ ಸಲಹೆ ನೀಡಿದೆ.

Advertisement

ಹವಾಮಾನ, ಇಂಧನ, ಪರಿಸರ ಕಾಳಜಿ ಕುರಿತು ಜಪಾನ್‌ನಲ್ಲಿ ನಡೆಯುತ್ತಿರುವ ಜಿ-7 ರಾಷ್ಟ್ರಗಳ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿರುವ ಅವರು,”2025ರ ವೇಳೆಗೆ ಜಾಗತಿಕವಾಗಿ ಶೂನ್ಯ ಹೊಗೆ ಹೊರಸೂಸುವಿಕೆಯನ್ನು ಸಾಧಿಸಲು ಎಲ್ಲ ರಾಷ್ಟ್ರಗಳು ಮತ್ತಷ್ಟು ಪ್ರಯತ್ನ ಹೆಚ್ಚಿಸುವ ಅಗತ್ಯವಿದೆ. ಆದರೆ, ಈಗಾಗಲೇ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ವಹಿಸಿದರೆ, ಭಾರತದಂಥ ಮುಂದುವರಿಯುತ್ತಿರುವ ರಾಷ್ಟ್ರಗಳು ತಮ್ಮ ಜನರಿಗೆ ಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಾಗುತ್ತದೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next