Advertisement

ಸಚಿವ ಸಿ.ಸಿ.ಪಾಟೀಲ್ ಬೆಂಗಾಲು ವಾಹನಕ್ಕೆ ಲಾರಿ ಢಿಕ್ಕಿ

09:40 PM Jun 06, 2021 | Team Udayavani |

ಚಿತ್ರದುರ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾದ ಘಟನೆ ಹಿರಿಯೂರು ತಾಲೂಕಿನಲ್ಲಿ ಭಾನುವಾರ ನಡೆದಿದೆ.

Advertisement

ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಸಮೀಪ ಸಚಿವರ ಬೆಂಗಾವಲು ವಾಹನಕ್ಕೆ ಚಾಲಕನ ಅಜಾಗರೂಕತೆಯಿಂದ ಲಾರಿ ಅಡ್ಡ ಬಂದಿದೆ. ಬೆಂಗಾವಲು  ವಾಹನದ ವಾಹನ ಚಾಲಕನ ಸಮಯ ಪ್ರಜ್ಞೆಯಿಂದ ವಾಹನ ನಿಯಂತ್ರಿಸಿದ್ದು ಬಾನೆಟ್ ಮಾತ್ರ ಜಖಂ ಆಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸಚಿವರ ಬೆಂಗಾವಲು ವಾಹನ ಅಪಘಾತವಾದ ಹಿನ್ನಲೆಯಲ್ಲಿ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆ ಮಾಡಿ ಸಚಿವರನ್ನು ಕಳುಹಿಸಿಕೊಡಲಾಯಿತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next