Advertisement

ಲಾಕ್ ಡೌನ್ ನಡುವೆ ಟ್ಯಾಕ್ಟರ್ ನಲ್ಲಿ ಗದ್ದೆ ಉಳುಮೆ ಮಾಡಿದ ಸಚಿವ ಸಿ ಟಿ ರವಿ

05:23 PM Apr 07, 2020 | keerthan |

ಚಿಕ್ಕಮಗಳೂರು: ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟುಲು ರಾಜ್ಯಾದ್ಯಂತ ಲಾಕ್‍ಡೌನ್ ವಿಧಿಸಲಾಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿದ್ದು ಮಂಗಳವಾರ ತಮ್ಮ ಫಾರ್ಮ್ ಹೌಸ್ ನಲ್ಲಿ  ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಬೇಸಾಯ ಮಾಡುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

Advertisement

ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್‍ಡೌನ್ ವಿಧಿಸಿದ್ದು, ಲಾಕ್‍ ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಕಳೆದೊಂದು ವಾರದಿಂದ ಭೇಟಿ ಮಾಡಿ ಅವರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಒದಗಿಸುವುದರ ಜೊತೆಗೆ ಮಂಗಳವಾರ ಬಿಡುವಿನ ಸಮಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಭೂಮಿ ಉಳಿಮೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಸೋಮವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದರಿಂದ ಭೂಮಿ ಅಲ್ಪಸ್ವಲ್ಪ ಹದಗೊಂಡಿದೆ. ರಾಮನಹಳ್ಳಿಯಲ್ಲಿರುವ ತಮ್ಮ ಫಾರ್ಮ್ ಹೌಸ್‍ನಲ್ಲಿ ಸಚಿವ ಸಿ.ಟಿ.ರವಿ ಟ್ರ್ಯಾಕ್ಟರ್‍ನಲ್ಲಿ ಉಳಿಮೆ ಮಾಡುವ ಮೂಲಕ ಭೂಮಿಯನ್ನು ಹದಗೊಳಿಸುವ ಮೂಲಕ ರಾಜಕೀಯ ಜೀವನದ ನಡುವೆಯೂ ಉಳಿಮೆಯನ್ನು ಮರೆತಿಲ್ಲ ಎಂಬುದನ್ನು ತೋರಿಸಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next