Advertisement

Minister ಡಿ.ಸುಧಾಕರ್ ಜಾತಿ‌ನಿಂದನೆ ಪ್ರಕರಣ: ಧಾರವಾಡ ಹೈಕೋಟ್೯ ತಡೆ

09:19 PM Sep 15, 2023 | Team Udayavani |

ಧಾರವಾಡ : ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಸಚಿವ ಡಿ. ಸುಧಾಕರ್‌ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಧಾರವಾಡ ಹೈಕೋರ್ಟ ಪೀಠವು ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement

ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಸುಬ್ಬಮ್ಮ ಎಂಬುವರು ಸೆವೆನ್ಸ ಹಿಲ್ಸ ಡೆವಲಪರ್ ಆರ್.ಕೆ. ಟ್ರೇಡರ್ಸ ಪ್ರೈವೇಟ್ ಲಿಮಿಟೆಡ್ ಮೇಲೆ ಹಾಗೂ ಸಚಿವ ಡಿ. ಸುಧಾಕರ ಅವರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಅವರ ಮೇಲೆ ದೌರ್ಜನ್ಯ, ವಂಚನೆ ಮತ್ತು ಹಲ್ಲೆ ಆರೋಪದಡಿ ಅಟ್ರಾಸಿಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ದೂರನ್ನು ರದ್ದುಪಡಿಸುವಂತೆ ಹೈಕೋರ್ಟನಲ್ಲಿ ಸಚಿವ ಡಿ. ಸುಧಾಕರ ಅವರು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ಕೈಗೊಂಡ ಹೈಕೋರ್ಟ ಏಕಸದಸ್ಯ ಪೀಠವು, ಯಲಹಂಕ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಡಿ, ವಿಚಾರಣೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next