Advertisement

ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಸೋತಿದ್ದೇಕೆ?

06:55 AM Oct 20, 2018 | |

ವಿಜಯಪುರ: ಲಿಂಗಾಯಿತ ಪ್ರತ್ಯೇಕ ಧರ್ಮ ವಿಷಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಪ್ಪು ಮಾಡಿದ್ದರಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದೆ ಎಂದು ಡಿಕೆಶಿ ಹೇಳಿದ್ದಾರೆ.

Advertisement

ಆದರೆ, ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಕೂಡ ಕಾಂಗ್ರೆಸ್‌ ಸೋತಿದೆ ಎಂಬುದನ್ನು ಶಿವಕುಮಾರ ಮರೆತಿದ್ದಾರೆ ಎಂದು ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದ ಮುಂಚೂಣಿ ನಾಯಕ ಹಾಗೂ ಮಾಜಿ ಸಚಿವ ಡಾ.ಎಂ.ಬಿ.ಪಾಟೀಲ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಒಕ್ಕಲಿಗರು ಹಾಗೂ ಕೆಂಪೇಗೌಡರ ಕುರಿತು ಲಿಂಗಾಯಿತರು ಅಪಾರ ಪ್ರೀತಿ, ಗೌರವ ಇರಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಲಿಂಗಾಯಿತರ ಅಸ್ಮಿತೆಯನ್ನು ಡಿ.ಕೆ.ಶಿವಕುಮಾರ ಪ್ರಶ್ನಿಸುವ ಹಾಗೂ ನಮ್ಮ ಧರ್ಮದ ಹೋರಾಟದ ವಿಷಯದಲ್ಲಿ ಮೂಗು ತೂರಿಸುವ ಕೆಲಸ ಮಾಡಬಾರದು. ಯಾರನ್ನೋ ಓಲೈಸಲು ಇಂಥ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಪ್ರತ್ಯೇಕ ಧರ್ಮ ಮಾನ್ಯತೆ ಪ್ರಸ್ತಾವನೆಯನ್ನು ಕೇಂದ್ರಕ್ಕೆ ರವಾನಿಸಿದ ಸಂದರ್ಭದಲ್ಲಿ ಅವರೂ ಸಚಿವರಾಗಿದ್ದರು. ಹೀಗಾಗಿ, ಸಿದ್ದರಾಮಯ್ಯ ಸರ್ಕಾರ ಲಿಂಗಾಯಿತ ಪ್ರತ್ಯೇಕ ಧರ್ಮ ಮಾನ್ಯತೆ ವಿಷಯದಲ್ಲಿ ಪಕ್ಷಪಾತ ಮಾಡಿಲ್ಲ. ಬಸವ ಅನುಯಾಯಿಗಳ ಭಾವನೆಗೆ ಸ್ಪಂದಿಸಿ ಅವರು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಯಾವ ತಪ್ಪನ್ನೂ ಮಾಡಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next