Advertisement

ಚಾಮುಂಡಿ ದೇವಿಗೆ 31 ಕೆಜಿ ತೂಕದ 2 ಬೆಳ್ಳಿ ಆನೆ ಸಮರ್ಪಿಸಿದ ಡಿಕೆಶಿ

01:58 PM Sep 25, 2017 | Sharanya Alva |

ಮೈಸೂರು/ಚಾಮರಾಜನಗರ: ಆದಾಯ ತೆರಿಗೆ ಅಧಿಕಾರಿಗಳ ದಾಳಿ ಬಳಿಕ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು 2ನೇ ಬಾರಿಗೆ ಕುಟುಂಬ ಸಮೇತರಾಗಿ ಚಾಮುಂಡಿ ತಾಯಿಯ ದರ್ಶನ ಪಡೆದು, ದೇವಸ್ಥಾನಕ್ಕೆ 2 ಬೆಳ್ಳಿ ಆನೆಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಹರಕೆಯನ್ನು ತೀರಿಸಿದ್ದಾರೆ.

Advertisement

ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಅವರು 31ಕೆಜಿ ತೂಕದ 2 ಬೆಳ್ಳಿ ಆನೆಗಳನ್ನು ಹರಕೆಯಾಗಿ ನೀಡಿದರು. ಭಾನುವಾರ ಡಿಕೆಶಿ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ನೆರವೇರಿಸಿ ಹರಕೆ ತೀರಿಸಿದ್ದರು.

ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಡಿಕೆಶಿ ಅವರು ಸುದ್ದಿಗಾರರ ಜತೆ ಮಾತನಾಡಿ, ಈ ಹಿಂದೆ ನೀಡಿದ್ದ ಬೆಳ್ಳಿ ಆನೆ ಸರಿ ಇರಲಿಲ್ಲ, ಹೀಗಾಗಿ ಈಗ ಹೊಸ ಬೆಳ್ಳಿ ಆನೆ ನೀಡಿದ್ದೇನೆ. ನಾನು ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ದೇವಿ ನೆರವೇರಿಸಿದ್ದಾಳೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next