Advertisement

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

06:21 PM Jul 07, 2022 | Team Udayavani |

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ವಿಚಾರದಲ್ಲಿ ವೇಗವಾಗಿ ತನಿಖೆ ನಡೆಯುತ್ತಿದೆ. ಪ್ರತಿಪಕ್ಷಗಳು ಸುಖಾಸುಮ್ಮನೆ ಆರೋಪಿಸುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು,  ಈ ಹಿಂದೆ ಗೃಹಸಚಿವರಾದವರು ಮುಖ್ಯಮಂತ್ರಿ ಆಗಿದ್ದಾರೆ. ವೇಗವಾಗಿ ತನಿಖೆ ನಡೆಯುತ್ತಿದೆ. ಎಡಿಜಿಪಿ ಅಂತಹ ಅಧಿಕಾರಿ ಬಂಧನ ಆಗಿದೆ. ಈ ಹಿಂದೆ  ಈ ರೀತಿ ಯಾರನ್ನಾದರೂ ಬಂಧಿಸಿದ್ದಾರಾ ಎಂದು ಪ್ರಶ್ನಿಸಿದರು.

ಹಿಂದಿನ ಸರ್ಕಾರದಲ್ಲಿ ಸಮಿತಿ ಮಾಡಿದರೂ ಯಾರನ್ನೂ ಬಂಧಿಸಲಿಲ್ಲ. ಯಾರೋ ಮೇಲೆ ಆರೋಪ ಮಾಡುವುದಲ್ಲ, ಎಲ್ಲದಕ್ಕೂ ಸಾಕ್ಷಿ ಬೇಕಿದೆ ಎಂದರು.

ಎಡಿಜಿಪಿ ಬಂಧನಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶಂಸೆ ಮಾಡಬೇಕು. ಅದು ಬಿಟ್ಟು ಈ ರೀತಿ ಹೇಳಿಕೆ ನೀಡಿ ವಯಕ್ತಿಕ ತೇಜೋವದೆ ಮಾಡಬಾರದು ಎಂದು ಹೇಳಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಹೇಳಿದ ಮಾತ್ರಕ್ಕೆ ಯಾರೂ ಅಪರಾಧಿಗಳು ಆಗಲ್ಲ. ಏನು ದಾಖಲೆ ಇದೆ, ದಾಖಲೆ ಕೊಡಲಿ. ಇದು ಸಿದ್ದರಾಮಯ್ಯ ಅವರ ವಯಕ್ತಿಕ ಜೀವನಕ್ಕೂ ಶೋಭೆ ತರುವುದಿಲ್ಲ ಎಂದು ತಿಳಿಸಿದರು.

Advertisement

ನಾನು ಒಕ್ಕಲಿಗ, ಹಾಗೆಂದ ಮಾತ್ರಕ್ಕೆ ಒಕ್ಕಲಿಗ ಅಭ್ಯರ್ಥಿಗಳೆಲ್ಲ ನನ್ನ ಸಂಬಂಧಿಕರಾಗ್ತಾರಾ ಎಂದು ಪ್ರಶ್ನಿಸಿದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next