Advertisement

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಕಾನೂನು ತೊಡಕಿದೆ: ಸಚಿವ ಡಾ.ಎಂ.ಸಿ.ಸುಧಾಕರ್

11:41 AM Dec 21, 2023 | Team Udayavani |

ಚಿಕ್ಕಬಳ್ಳಾಪುರ: ಅತಿಥಿ ಉಪನ್ಯಾಸಕರ ಖಾಯಂ ಅಸಾಧ್ಯ ಎಂದು ಹಿಂದಿನ ಸರ್ಕಾರವೇ ಬಹಳ ಸ್ಪಷ್ಟವಾಗಿ ಹೇಳಿವೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

Advertisement

ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೋರಾಟದಿಂದ ಹಿಂದೆ ಸರಿಯಬೇಕೆಂದರು. ಅತಿಥಿ ಉಪನ್ಯಾಸಕರ ಖಾಯಂ ವಿಚಾರದಲ್ಲಿ ಸಾಕಷ್ಡು ಕಾನೂನು ತೊಡಕುಗಳಿವೆ ಎಂದರು.

ತಿಂಗಳಿಂದ ಅತಿಥಿ ಉಪನ್ಯಾಸಕರ ಹೋರಾಟ ನಡೆಯುತ್ತಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸ ಮೇಲೆ ಸಾಕಷ್ಡು ದುಷ್ಪರಿಣಾಮ ಬೀರಿದೆ ಎಂದ ಅವರು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇದನ್ನು ಅತಿಥಿ ಉಪನ್ಯಾಸಕರು ಅರ್ಥ ಮಾಡಿಕೊಳ್ಳಬೇಕು. ಕಾನೂನು ಚೌಕಟ್ಟಿನಲ್ಲಿ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಸರ್ಕಾರ ಮಾಡಲಿದೆ ಎಂದರು.

ಈಗಾಗಲೇ ಈ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು, ಆರ್ಥಿಕ ಇಲಾಖೆ ಜೊತೆಗೆ ‌ಚರ್ಚೆ ಮಾಡಲಾಗಿದೆ.  ನಮ್ಮ ಪಕ್ಷ ಕೂಡ ಈ ಬಗ್ಗೆ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿದೆ. ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನನ್ನ ಪ್ರಾಮಾಣಿಕ ಪ್ರಯತ್ನ ಮುಂದುವರೆದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next