Advertisement

ರವಿಶಂಕರ ಗುರೂಜಿ ಭೇಟಿ ಮಾಡಿ ಚರ್ಚಿಸಿದ ಸಚಿವ ಈಶ್ವರಪ್ಪ

11:23 AM Apr 16, 2020 | keerthan |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ ಗುರೂಜಿಯವರನ್ನು ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

Advertisement

ನಗರದ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ನಲ್ಲಿ ಭೇಟಿಯಾದ ಸಚಿವರು ಪಂಚಾಯತ್ ರಾಜ್ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ನರೇಗಾ ಯೋಜನೆಯ ಮುಖಾಂತರ ಆಯ್ದ ಕೆಲವು ಜಿಲ್ಲೆಗಳಲ್ಲಿ ಜಲಸಂಪನ್ಮೂಲ ಅಭಿವೃದ್ಧಿ ಕೈಗೊಳ್ಳುವ ಬಗ್ಗೆ,  ನದಿ, ಹಳ್ಳ-ಕೊಳ್ಳಗಳ ಪಾತ್ರ ಮತ್ತು ಕೆರೆ-ಕಟ್ಟೆ, ಚೆಕ್ ಡ್ಯಾಂ ಗಳ ಪಾತ್ರಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ, ಸಂಸ್ಥೆಯ ಪ್ರಮುಖರೊಂದಿಗೆ, ಮತ್ತು ಜಲತಜ್ಞರೊಂದಿಗೆ  ಗುರೂಜಿ ನೇತೃತ್ವದಲ್ಲಿ ಸಭೆ ನಡೆಸಿ ಯೋಜನೆ ಅನುಷ್ಠಾನದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿ ಮಾರ್ಗದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರು ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ.ಕಾಂತೇಶ್, ಸಚಿವರ ಆಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next