Advertisement

“ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ  ನೀಡಿ’

06:30 AM Sep 24, 2018 | Team Udayavani |

ಬೆಳಗಾವಿ: ಸಮ್ಮಿಶ್ರ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಬೇಡಿಕೆ ಇದ್ದೇ ಇದೆ. ಅದನ್ನು ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ಇನ್ನೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ನಾವು ಮೊದಲಿನಿಂದಲೂ ಕೇಳುತ್ತಿದ್ದೇವೆ. ಅದರ ಬಗ್ಗೆ ಹೈಕಮಾಂಡ್‌ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಮುಂಬೈ ಅಥವಾ ಚೆನ್ನೆçಗೆ ಅತೃಪ್ತ ಶಾಸಕರು ಹೋಗಿದ್ದಾರೆ ಎನ್ನುವುದೆಲ್ಲ ಸುಳ್ಳು. ಯಾರೂ ಎಲ್ಲಿಯೂ ಹೋಗಿಲ್ಲ. ಶಾಸಕ ಎಂಟಿಬಿ ನಾಗರಾಜ ಅವರು ಮದುವೆ ಕಾರ್ಯಕ್ರಮಕ್ಕೆ ಹೋಗಿ ಮತ್ತೆ ಬೆಂಗಳೂರಿಗೆ ವಾಪಸ್‌ ಬಂದಿದ್ದಾರೆ. ನಮ್ಮ ಪಕ್ಷದಲ್ಲಾಗಲೀ ಅಥವಾ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದರು.

ಎಸ್ಕಾರ್ಟ್‌ ಬಳಸದೇ ಖಾಸಗಿ ವಾಹನದಲ್ಲಿ ಸಂಚರಿಸುತ್ತಿರುವುದು ಮೊದಲಿನಿಂದಲೂ ನಮ್ಮ ಕುಟುಂಬದ ಸ್ಟೈಲ್‌. ನನ್ನ ಸಹೋದರರಾದ ಬಾಲಚಂದ್ರ, ಸತೀಶ ಸಚಿವರಾಗಿದ್ದಾಗಲೂ ಸರ್ಕಾರಿ ವಾಹನಗಳನ್ನು ಜಾಸ್ತಿ ಬಳಸುವುದಿಲ್ಲ. ಹಾಗೆಯೇ ನಾನೂ ಹೆಚ್ಚು ಸರ್ಕಾರಿ ವಾಹನ ಬಳಸುತ್ತಿಲ್ಲ. ಇದರಲ್ಲಿ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next