Advertisement
ರಾಜ್ಯದಲ್ಲಿ ಎರಡನೆ ಕೊರೊನಾ ಅಲೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿ ಸಾವು-ನೋವು ಸಂಭವಿಸಿದ್ದರಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದೆ ಸುಮಾರು 2 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
Related Articles
Advertisement
ಶಿಕ್ಷಣ, ಆರೋಗ್ಯ, ಅನ್ನ, ವಸತಿ ಕ್ಷೇತ್ರಗಳಿಗೆ ವಿಶೇಷವಾಗಿ ಗಮನ ಹರಿಸಿರುವ ಅವರು, ಕ್ಷೇತ್ರದಲ್ಲಿ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲೆಂದು ಮೂರು ಮಾದರಿ ಸರ್ಕಾರಿ ಶಾಲೆಗಳನ್ನು ನಿರ್ಮಿಸಿದ್ದಾರೆ.ಒಂದೊಂದು ಶಾಲೆಯಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಭಗವಂತ ಅವರಿಗೆ ಇನ್ನಷ್ಟು ಸಮಾಜಸೇವೆ ಮಾಡುವ ಅವಕಾಶ ನೀಡಲಿ ಎಂದು ಆಶಿಸಿದರು. ಗೋಪಾಲಯ್ಯ ಮಾತನಾಡಿ, ಕೊರೊನಾ ಬಂದ ಸಂದರ್ಭದಲ್ಲಿ ನಾನು ಹುಟ್ಟುಹಬ್ಬ ಆಚರಿಸಬಾರದೆಂದು ನನ್ನ ಕ್ಷೇತ್ರದ ಜನತೆ, ಸಾರ್ವಜನಿಕರು, ಹಿತೈಷಿಗಳು, ಪಕ್ಷದ ಮುಖಂಡರಿಗೆ ಮನವಿ ಮಾಡಿಕೊಂಡಿದ್ದೆ. ಹಾರ, ತುರಾಯಿ, ಶಾಲು ಹಾಕಿಕೊಂಡರೆ ಅರ್ಥ ಬರುವುದಿಲ್ಲ. ಇದರ ಬದಲಿಗೆ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಕಿಟ್ಗಳನ್ನು ನೀಡಬೇಕೆಂದು ತೀರ್ಮಾನಿಸಿದ್ದೆ ಎಂದರು. ಈಗಾಗಲೇ ಕ್ಷೇತ್ರದಲ್ಲಿ ಖಾಸಗಿ ಶಾಲೆಗಳಿಗೆ ಸ್ಪರ್ಧೆ ನೀಡುವಂತೆ ದೆಹಲಿಯಲ್ಲಿರುವ ಶಾಲೆಗಳಿಗಿಂತಲೂ ಉತ್ತಮ ಮೂಲಭೂತ ಸೌಕರ್ಯಗಳುಳ್ಳ ಮೂರು ಶಾಲೆಗಳನ್ನು ನಿರ್ಮಿಸಲಾಗಿದೆ. ಕೊರೊನಾ ಕಾರಣದಿಂದ ಅದು ಉದ್ಘಾಟನೆಯಾಗಲಿಲ್ಲ. ಶೀಘ್ರದಲ್ಲೇ ಶ್ರೀಗಳ ಆಶೀರ್ವಾದದೊಂದಿಗೆ ಪ್ರಾರಂಭಿಸುವುದಾಗಿ ಹೇಳಿದರು. ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಕೊರೊನಾ ಬಂದಾಗ ಜನಪ್ರತಿನಿಗಳು ಜನರನ್ನು ಮರೆಯುವುದೇ ಹೆಚ್ಚು. ಆದರೆ, ಇದಕ್ಕೆ ವ್ಯತಿರಿಕ್ತವೆಂಬಂತೆ ತಮ್ಮ ಪ್ರಾಣ, ಕುಟುಂಬದ ಸದಸ್ಯರನ್ನೂ ಲೆಕ್ಕಿಸದೆ ಗೋಪಾಲಯ್ಯನವರು ಕ್ಷೇತ್ರದ ಜನತೆಗೆ ಸಂಜೀವಿನಿಯಾಗಿ ಪರಿಣಮಿಸಿದ್ದಾರೆ ಎಂದು ಬಣ್ಣಿಸಿದರು. ದೇವರು ಅವರಿಗೆ ಇನ್ನಷ್ಟು ಶಕ್ತಿಯನ್ನು ನೀಡಿ ಜನಸೇವೆ ಮಾಡುವ ಅವಕಾಶ ಕೊಡಲಿ. ಅದೇ ರೀತಿ ಕೊರೊನಾವೂ ನಮ್ಮಿಂದ ದೂರವಾಗಲಿ ಎಂದು ಶ್ರೀಗಳು ಆಶಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು ಮಾಜಿ ಉಪ ಮೇಯರ್ ಗಳಾದ ಹೇಮಲತ ಗೋಪಾಲಯ್ಯ ಹರೀಶ್ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಜಯರಾಮಯ್ಯ ಸೇರಿದಂತೆ ಪಕ್ಷದ ಮುಖಂಡರು ಗಳು ಉಪಸ್ಥಿತರಿದ್ದರು.