Advertisement

ನಾವು ಕುಸ್ತಿ ಆಡದೆಯೇ ಗೆಲ್ಲುತ್ತೇವೆ: ಸಚಿವ ಗೋವಿಂದ ಕಾರಜೋಳ

02:24 PM Dec 05, 2021 | Team Udayavani |

ಬೆಳಗಾವಿ: ಜಿಲ್ಲೆಯ ವಿಧಾನಪರಿಷತ್ ಚುನಾವಣೆಯಲ್ಲಿ ನಮಗೆ ಕುಸ್ತಿ ಹಿಡಿಯುವ ಪ್ರಮೇಯವೇ ಬರುವದಿಲ್ಲ. ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಯಾವುದೇ ಆತಂಕವಿಲ್ಲದೆ ಜಯಗಳಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ 8800 ಕ್ಕೂ ಜನನ ಹೆಚ್ಚು ಮತದಾರರಿದ್ದಾರೆ. ಅದರಲ್ಲಿ ಬಿಜೆಪಿಯ 5150 ಕುಸ್ತಿ ಪಟುಗಳಿದ್ದಾರೆ‌.‌ ಹೀಗಾಗಿ ನಾವು ಕುಸ್ತಿ ಆಡದೆಯೇ ಗೆಲ್ಲುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು.

ಕಾಂಗ್ರೆಸ್ ಗೆ ನಿಜವಾಗಿಯೂ ಕುಸ್ತಿ ಆಡಲೇಬೇಕಾದ ಸ್ಥಿತಿ ಇದೆ. ಗೆಲ್ಲಬೇಕಾದರೆ ಬಹಳ ಪ್ರಯಾಸ ಪಡಬೇಕು. ತಮಗಿರುವ ಆತಂಕವನ್ನು ಬಿಜೆಪಿ ಮೇಲೆ ಹಾಕುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:ಬಹಳ ಜನರಿಗೆ ಗೊತ್ತಿಲ್ಲ, ಕಲಾವಿದರ ಸಂಘಕ್ಕೆ ಮೂಲ ಪುರುಷ ಶಿವರಾಂ: ಅನಂತ್‍ನಾಗ್

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷದಿಂದ ಒಬ್ಬರೇ ಅಭ್ಯರ್ಥಿ ಎಂದು ಮೊದಲೇ ಘೋಷಣೆ ಮಾಡಲಾಗಿದೆ. ಅದರಂತೆ ಎಲ್ಲರೂ ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಜಯಗಳಿಸುವದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ಈ ಚುನಾವಣೆಯಿಂದ ಕಾಂಗ್ರೆಸ್ ಮಾಯವಾಗಲಿದೆ ಎಂದು ಕಾರಜೋಳ ಭವಿಷ್ಯ ನುಡಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next