Advertisement

ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಯೋಜನೆ ಅನುಷ್ಟಾನಕ್ಕೆ ಕ್ರಮ: ಕಾರಜೋಳ

10:06 PM Mar 15, 2022 | Team Udayavani |

ವಿಧಾನಸಭೆ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಒಂಬತ್ತು ಉಪ ಯೋಜನೆಗಳ ಅನುಷ್ಟಾನ, ಪುನರ್‌ ವಸತಿ-ಪುನರ್‌ ನಿರ್ಮಾಣಕ್ಕೆ 1,862.86 ಕೋಟಿ ರೂ. ಮೀಸಲಿಡಲಾಗಿದೆ ಎಂದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ದೇವಾನಂದ್‌ ಚವ್ಹಾಣ್‌ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2021-22 ನೇ ಸಾಲಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಒದಗಿಸಲಾದ ಅನುದಾನದಲ್ಲಿ 1,862.86 ಕೋಟಿ ರೂ. ಅನುದಾನ ಮೀಸಲಿಟ್ಟು ಪ್ರಸ್ತುತ ಯೋಜನಾ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಇದನ್ನೂ ಓದಿ:ಸಬ್‌ ಕಾ ವಿಶ್ವಾಸ್‌ ಸೇ ಕಾಂಗ್ರೆಸ್‌ ಸರ್ವನಾಶ್‌: ಬೋಪಯ್ಯ

ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ 51.148.94 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತದ ಯೋಜನಾ ವರದಿ ಇಗಾಗಲೇ ಕೇಂದ್ರ ಜಲ ಆಯೋಗದಿಂದ ಅಗತ್ಯ ಪೂರ್ವಬಾವಿ ಪರಿಶೀಲನೆ ಮಾಡುವಂತೆ ಕೋರಿ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ, ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೋರಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next