Advertisement

ಹೊಸ ವರ್ಷ ಸಂಭ್ರಮಾಚರಣೆಗೆ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಅಬಕಾರಿ ಸಚಿವ

09:51 AM Jan 01, 2020 | Team Udayavani |

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೆ ಗಂಟೆಗಳು ಬಾಕಿ ಉಳಿದಿದೆ. ಅಷ್ಟರಲ್ಲಿ ರಾಜ್ಯ ಸರಕಾರ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ರಾತ್ರಿ 2 ಗಂಟೆಯವರೆಗೆ ಮದ್ಯದಂಗಡಿಗಳು ಕಾರ್ಯನಿರ್ವಹಿಸಲಿದೆ. ಇದರಿಂದ ಹೆಚ್ಚಿನ ರಾಜಸ್ವ ಸಂಗ್ರಹವಾಗಲಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಡ ಜನರು ಹೆಚ್ಚಾಗಿ ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿಯಲ್ಲಿ ಸರಬರಾಜು ಮಾಡುವ ಉದ್ದೇಶವಿದೆ ಎಂದು ಹೇಳಿದರು.

ರಾತ್ರಿ ಎರಡು ಗಂಟೆಯವರೆಗೆ ಬಾರ್ ಗಳನ್ನು ತೆರೆದಿಡುವ ಮೂಲಕ ರಾಜ್ಯ ಸರಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹವಾಗುತ್ತದೆ. 20950 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ರಾಜ್ಯ ಸರಕಾರದ ಮುಂದಿದೆ ಎಂದರು.

ಈ ಹಿಂದೆ ಮನೆಮನೆಗೆ ಅಬಕಾರಿ ಇಲಾಖೆಯೇ ಮದ್ಯ ಸರಬರಾಜು ಮಾಡುವ ಹೇಳಿಕೆ ನೀಡಿ ಹೆಚ್ ನಾಗೇಶ್ ವಿವಾದಕ್ಕೆ ಗುರಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next