Advertisement

ಮೈಸೂರು ವಿದ್ಯಾರ್ಥಿನಿ ಪ್ರಕರಣ; ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ: ಹಾಲಪ್ಪ ಆಚಾರ್

10:35 AM Aug 27, 2021 | Team Udayavani |

ಬೆಂಗಳೂರು: ಸಾಂಸ್ಕೃತಿಕ ನಗರದಲ್ಲಿ ನಿರೀಕ್ಷೆ ಮಾಡದ ಘಟನೆ ನಡೆದಿದೆ. ನಾವೆಲ್ಲರೂ ಆ ಘಟನೆಯ ಸಂತ್ರಸ್ತೆಗೆ ಸಾಂತ್ವನ ಹೇಳಬೇಕಿದೆ. ಆ ಯುವತಿಗೆ ನ್ಯಾಯ ಕೊಡಿಸಬೇಕಿದೆ. ಅಪರಾಧಿಗಳಿಗೆ ಕಠಿಣ ಕ್ರಮ ಆಗಬೇಕಿದೆ. ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳಿಗೆ ಈ ಸಂಬಂಧ ನಿರ್ದೇಶನ ಕೊಟ್ಟಿದ್ದಾರೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.

Advertisement

ಘಟನೆಯ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ:ಮೈಸೂರು ದರೋಡೆ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು: ಪುಣೆಯಲ್ಲಿ ಇಬ್ಬರು ಆರೋಪಿಗಳ ಬಂಧನ

ನಾನು ಇವತ್ತು ಮೈಸೂರಿಗೆ ಹೋಗುತ್ತಿದ್ದೇನೆ. ಹಿರಿಯ ಅಧಿಕಾರಿಗಳ ಜತೆ ಪ್ರಕರಣ ಬಗ್ಗೆ ಚರ್ಚೆ ಮಾಡುತ್ತೇನೆ. ಅತ್ಯಾಚಾರ ಪ್ರಕರಣ ಬಗ್ಗೆ ನಮ್ಮ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮ ಕೈಗೊಳ್ಳುತ್ತೇವೆ ಎಂದರು.

ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ಭೇಟಿ ಮಾಡಲು ಯಾರಿಗೂ ಅವಕಾಶ ಕೊಡುತ್ತಿಲ್ಲ. ನಾನು ಇವತ್ತು ಮೈಸೂರಿಗೆ ಹೋಗುತ್ತಿದ್ದೇನೆ. ನಿನ್ನೆಯೇ ನಮ್ಮ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next