Advertisement

ತಮ್ಮ ಅಸ್ತಿತ್ವ ತೋರಿಸುವುದಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ: ಸಚಿವ ಹಾಲಪ್ಪ ಆಚಾರ್

06:39 PM Jul 25, 2022 | Team Udayavani |

ಧಾರವಾಡ: ಸಿದ್ದರಾಮೋತ್ಸವ ಜನಪರವಾದ ಉತ್ಸವ ಅಲ್ಲವೇ ಅಲ್ಲ. ತಮ್ಮ ಅಸ್ತಿತ್ವಕ್ಕಾಗಿ ಈ ಉತ್ಸವ ಮಾಡಿಕೊಳ್ಳುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

Advertisement

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವದಿಂದ ಜನರಿಗೆ ಯಾವುದೇ ಲಾಭವಿಲ್ಲ. ಅವರು ತಮ್ಮ ಅಸ್ತಿತ್ವ ತೋರಿಸುವುದಕ್ಕಾಗಿ ಈ ಉತ್ಸವ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ಹಿನ್ನಡೆಯಾಗುವುದಿಲ್ಲ ಎಂದರು.

ಆರ್‌ಎಸ್ಎಸ್ ಒಂದು ಸುಳ್ಳು ಸಂಘ ಎಂಬ ಹೇಳಿಕೆ ಕೊಟ್ಟ ಪ್ರೊ.ಕೆ.ಎಸ್.ಭಗವಾನ್ ಅವರಿಗೆ ತಿರುಗೇಟು ನೀಡಿದ ಸಚಿವರು, ಒಬ್ಬ ವ್ಯಕ್ತಿಯ ಬೆಳವಣಿಗೆ ಸಹಿಸಲಾರದ ವ್ಯಕ್ತಿ, ಬಾಯಿಗೆ ಬಂದಂತೆ ಮಾತನಾಡುವುದು ಹಾಗೂ ತಮ್ಮ ವ್ಯಕ್ತಿತ್ವ , ವಿಚಾರಗಳನ್ನು ಹೊರ ಹಾಕುವ ಕೆಲಸ ಮಾಡುತ್ತಾನೆ. ಅದಕ್ಕೆ ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇಲ್ಲ ಎಂದರು.

ಸಿಎಂ ದೆಹಲಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಅಧಿಕಾರ ಸ್ವೀಕಾರ ಸಮಾರಂಭಕ್ಕಾಗಿ ಸಿಎಂ ದೆಹಲಿಗೆ ಹೋಗಿದ್ದಾರೆ. ಸಂಪುಟ ವಿಸ್ತರಣೆಗೆ ಹೋಗಿಲ್ಲ. ಆ ಪ್ರಸಂಗ ಬಂದರೆ ದೆಹಲಿ ವರಿಷ್ಠರೇ ಸಿಎಂ ಅವರನ್ನು ಕರೆಯುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next