Advertisement

‘ಎಚ್ಡಿಕೆ’ಯವರನ್ನು ಸಿಎಂ ಮಾಡಿದ್ದು ‘ಸಿದ್ದು’ಅಲ್ಲ: ಸಚಿವ ಜೋಶಿ

08:33 PM Dec 18, 2020 | mahesh |

ಧಾರವಾಡ: ಮೈತ್ರಿ ಸರಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯನವರಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಎಚ್‌ಡಿಕೆ ಸರಕಾರ ಮಾಡಿದ್ದು ನಾನೇ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Advertisement

ಕಾಂಗ್ರೆಸ್‌ನ ಹೈಕಮಾಂಡ್ ಹೇಳಿದ್ದನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಆದರೆ, ನಾನೇ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಮೈತ್ರಿ ಸರ್ಕಾರ ಮಾಡಲು ಬೆಂಬಲ ನೀಡಿದ್ದು ಕಾಂಗ್ರೆಸ್ಸಿನ ಹೈಕಮಾಂಡ ಎನ್ನುವುದು ತಿಳಿದಿರಲಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೀತು ಎಂಬ ಭಯವಿತ್ತು. ಅದಕ್ಕಾಗಿ ಹೈಕಮಾಂಡ ಹೇಳಿದಂತೆ ಸಿದ್ದರಾಮ್ಯಯನವರು ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರೆ ಹೊರತು ಇದಕ್ಕಾಗಿ ಸಿದ್ದರಾಮಯ್ಯ ಬೆಂಬಲ ನೀಡಿಯೇ ಇಲ್ಲ ಎಂದರು.

ಕಾಂಗ್ರೆಸ್ ಬಗ್ಗೆ ಸಿ.ಎಂ.ಇಬ್ರಾಹಿಂ ಅಸಮಾಧಾನ ವಿಚಾರವಾಗಿ ಮಾತನಾಡಿದ ಜೋಶಿ, ಕಾಂಗ್ರೆಸ್ ಯಾವತ್ತೂ ಯಾರ ಪರವೂ ಇಲ್ಲ. ಅದು ಅಽಕಾರದ, ಭ್ರಷ್ಟಾಚಾರದ ಪರ. ಅದು ದಲ್ಲಾಳಿ, ತುಕ್ಡೇ ತುಕ್ಡೇ ಗ್ಯಾಂಗ್ ಪರವಾಗಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಪರವೂ ಇಲ್ಲ. ಆದರೆ ಬಿಜೆಪಿಯಲ್ಲಿ ಹಾಗಿಲ್ಲ. ಇವತ್ತು ಜೆ.ಪಿ. ನಡ್ಡಾ ಅಧ್ಯಕ್ಷರಾಗಿದ್ದಾರೆ. ನಾಳೆ ಯಾರಾದರೂ ಆಧ್ಯಕ್ಷರಾಗಬಹುದು. ಸಾಮಾನ್ಯ ಕಾರ್ಯಕರ್ತನೂ ಆಗಬಹುದು ಎಂದರು.

ದೆಹಲಿ ರೈತರ ಹೋರಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ದೇಶ ಹಾಗೂ ರಾಜ್ಯದ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಕಾಂಗ್ರೆಸ್, ಕೆಲ ರೈತರನ್ನು ಮುಂದೆ ಬಿಟ್ಟು ಷಡ್ಯಂತ್ರ ಮಾಡುತ್ತಿದೆ. ಈಗ ವಿರೋಧ ಮಾಡುವವರೇ ಈ ಹಿಂದೆ ಎಪಿಎಂಸಿ ಮುಕ್ತ ಮಾಡುವಂತೆ ಕೇಳಿದ್ದರು. ಕೃಷಿ ಕ್ಷೇತ್ರದ ಸುಧಾರಣೆಗೋಸ್ಕರ ಮಾಡಿರುವ ಕಾಯ್ದೆ ತಿದ್ದುಪಡಿಯು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯ. ರೈತರ ಶೋಷಣೆ ತಪ್ಪಿಸಲು ಈ ಕಾಯ್ದೆ ಜಾರಿ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next