Advertisement

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

11:50 PM Sep 18, 2024 | Team Udayavani |

ಬೆಂಗಳೂರು: ಅಪೆಕ್ಸ್‌ ಬ್ಯಾಂಕ್‌ ಹಗರಣ ಸಂಬಂಧ ಸಚಿವ ಕೆ.ಎನ್‌. ರಾಜಣ್ಣ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡು ವಂತೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರಿಗೆ ದೂರುದಾರ ದಿನೇಶ್‌ ಕಲ್ಲಹಳ್ಳಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.

Advertisement

ಒಂದು ವರ್ಷದ ಹಿಂದೆ ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದ ಅವರು, ಇದೀಗ ಮತ್ತೊಮ್ಮೆ ಪತ್ರ ಬರೆದಿದ್ದು, ನನ್ನ ಮನವಿಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಕೋರಿದ್ದಾರೆ.

ಸಚಿವ ರಾಜಣ್ಣ ವಿರುದ್ಧದ ದೂರಿಗೆ ಸಂಬಂಧಿಸಿದಂತೆ 2023ರ ಸೆ. 21ರಂದೇ ರಾಜ್ಯ ಸರಕಾರಕ್ಕೆ ರವಾನಿಸಿದ್ದ ರಾಜ್ಯಪಾಲರು, ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ವರದಿ ನೀಡುವಂತೆ ಕೇಳಿದ್ದರು. ಅದಾದ ಅನಂತರ ಸರಕಾರದಿಂದ ರಾಜಭವನಕ್ಕೆ ಮಾಹಿತಿ ರವಾನೆಯಾಗದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದ ದೂರುದಾರರು, ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ 2024 ರ ಜುಲೈ ತಿಂಗಳಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಮೂರು ತಿಂಗಳಲ್ಲಿ ಕ್ರಮ ವಹಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next