Advertisement

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

12:11 AM May 26, 2024 | Team Udayavani |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಷಯ ಚರ್ಚೆಗೆ ಬಂದಿರುವ ವೇಳೆಯಲ್ಲೇ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಉತ್ಸಾಹ ತೋರಿದ್ದು, “ನಾನೂ ಆಕಾಂಕ್ಷಿ’ ಎಂದಿದ್ದಾರೆ.

Advertisement

ಶನಿವಾರ ಬೆಂಗಳೂರಿನಲ್ಲಿ ಮಾತನಾಡಿ, “ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನಾರಚನೆ ವಿಷಯ ಹೈಕಮಾಂಡ್‌ಗೆ ಬಿಟ್ಟದ್ದು. ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡು ವುದಾದರೆ ನನಗೆ ಅವಕಾಶ ನೀಡಲಿ’  ಎಂದರು.

ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಯಾವ ರಾಜಕೀಯ ಅಧಿಕಾರವನ್ನೂ ಕೇಳುವುದಿಲ್ಲ. ಪಕ್ಷದ ಸಂಘಟನೆ ಮಾಡುತ್ತೇನೆ. ಧನ ಇಲ್ಲದೆ ಇರುವು ದರಿಂದ ನನ್ನ ತನು-ಮನಪೂರ್ವಕವಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next