Advertisement

ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಲು ಚಿಂತನೆ

04:50 PM May 26, 2020 | keerthan |

ಬೆಳಗಾವಿ: ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ಮಾದರಿ ಮಾಡಬಹುದು. ಆದ್ದರಿಂದ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಆರ್ಟ್ ಆಫ್ ಲಿವಿಂಗ್ ಜತೆ ಸೇರಿಕೊಂಡು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

Advertisement

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ತಾಲ್ಲೂಕುಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂತರ್ಜಲ ಚೈತನ್ಯ ಹೆಚ್ಚಳಕ್ಕೆ ಆದ್ಯತೆ ನೀಡಬೇಕು. ಜಿಲ್ಲಾಧಿಕಾರಿಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಆದಷ್ಟು ಬೇಗ ಭೂಮಿ ಪಡೆದುಕೊಳ್ಳಬೇಕು ಎಂದರು.

ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ.42 ರಷ್ಟು ಗುರಿ ಸಾಧಿಸಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ 3444 ಬದು ನಿರ್ಮಾಣ  ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.

Advertisement

ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ, 2,33, 713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ ಎಂದರು.

ಶಾಸಕ ಮಹಾಂತೇಶ ದೊಡ್ಡಗೌಡ್ರ ಮಾತನಾಡಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ಅಂತರ್ಜಲ ಚೈತನ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next