Advertisement

ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನು ಕಿತ್ತು ಹಾಕಿಕೊಳ್ಳುತ್ತಿದ್ದಾರೆ: ಈಶ್ವರಪ್ಪ ವ್ಯಂಗ್ಯ

03:18 PM Aug 24, 2021 | Team Udayavani |

ಚಿಕ್ಕಮಗಳೂರು: ಕಾಂಗ್ರೆಸ್ಸಿಗರ ಫ್ಯೂಸ್ ಹೆಚ್.ಡಿ.ಕುಮಾರಸ್ವಾಮಿ ಕಿತ್ತು ಹಾಕುವ ಅವಶ್ಯಕತೆ ಇಲ್ಲ. ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನು ಒಬ್ಬೊಬ್ಬರೇ ಕಿತ್ತು ಹಾಕಿಕೊಳ್ಳುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

Advertisement

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿರುವುದೇ ನಾಲ್ಕೈದು ಜನ ನಾಯಕರು, ಹೆಸರು ಹೇಳಲು ಇಚ್ಛೆ ಪಡಲ್ಲ. ಆದರೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ ಎಂದರು.

ಇದನ್ನೂ ಓದಿ:ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್ ನಲ್ಲಿ ನೇರ ಗುಂಪುಗಾರಿಕೆಯಿದೆ. ಹೊರಗೆ-ಒಳಗಿನ ಕಾಂಗ್ರೆಸ್ಸಿಗರೆಂದು ಒಂದು ಸಲ ಬಹಿರಂಗವಾಯಿತು. ಸದ್ಯಕ್ಕೆ ತಲೆ ಮೇಲೆ ತಟ್ಟಿ ನಿಲ್ಲಿಸಿದ್ದಾರೆ. ಅದು ಯಾವಾಗ ಪ್ರಜ್ವಲಿಸಿ ಸ್ಫೋಟ ಆಗುತ್ತದೆಯೆಂದು ಕಾಂಗ್ರೆಸ್ಸಿಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next