Advertisement

ಸಂತೋಷ್ ವಿಚಾರದಲ್ಲಿ ಸುಳ್ಳು ಹೇಳಿಕೆ ನೀಡುವ ಡಿಕೆ ಶಿವಕುಮಾರ್ ಗೆ ನಾಚಿಕೆಯಾಗಬೇಕು: ಈಶ್ವರಪ್ಪ

01:07 PM Nov 28, 2020 | keerthan |

ಬೆಳಗಾವಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್‌.ಆರ್.ಸಂತೋಷ್ ಆತ್ಮಹತ್ಯೆ ಯತ್ನದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಮೂರ್ಖತನದ್ದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

Advertisement

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ರೀತಿ ಹೇಳಿಕೆ ಕೊಡಲು ಡಿ.ಕೆ.ಶಿವಕುಮಾರ್ ಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದರು.

ವಿಡಿಯೋ ಲೀಕ್ ಆಗಿದೆ ಅಂದರೆ ಈ ವಿಡಿಯೋ ಇವರ ಹತ್ತಿರ ಇರಬೇಕು. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಇದ್ದು ಆರೋಪ ಮಾಡುವುದಕ್ಕೆ ಅವರಿಗೆ ಪೂರ್ಣ ಅಧಿಕಾರ ಇದೆ. ವಿಡಿಯೋ ಇದೆ ಅಂತಾ ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುವದು ಸರಿಯಲ್ಲ. ವಿಡಿಯೋ ಕಾಪಿ ನಿಮ್ಮಲ್ಲಿದ್ದರೆ ಬಿಡುಗಡೆ ಮಾಡಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.

ಇದನ್ನೂ ಓದಿ:ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಿಸುವ ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ: ಈಶ್ವರಪ್ಪ

ಕಾಂಗ್ರೆಸ್ ನೆಲ ಕಚ್ಚಿ ಹೋಗಿದ್ದು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಂಎಲ್‌ಎ ಯಾರು, ಎಂಎಲ್‌ಸಿ ಯಾರು, ಮಂತ್ರಿ ಯಾರು ಅಂತಾ ಹೇಳಲಿ. ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡುವದು ಖಂಡನೀಯ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next