Advertisement

ಸ್ಫೋಟಕ್ಕೂ ನಿಗೂಢ ಶಬ್ಧಕ್ಕೂ ಸಂಬಂಧ ಇರುವ ಬಗ್ಗೆ ತನಿಖೆಯಿಂದ ತಿಳಿಯಲಿದೆ: ಈಶ್ವರಪ್ಪ

09:31 AM Jan 22, 2021 | Team Udayavani |

ಶಿವಮೊಗ್ಗ: ಹುಣಸೋಡಿನಲ್ಲಿ ನಡೆದ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದ್ದು ಈ ಸ್ಫೋಟಕ್ಕೂ- ನಿಗೂಢ ಶಬ್ಧಕ್ಕೂ ಸಂಬಂಧವಿದೆಯಾ ಎಂಬುದರ ಬಗ್ಗೆ ತನಿಖಾ ತಂಡ ಸ್ಪಷ್ಟತೆ ನೀಡಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಸ್ಫೋಟಕ್ಕೆ ಕಾರಣವೇನು? ಶೃಂಗೇರಿಯವರೆಗೆ ಈಶಬ್ಧ ಕೇಳಿದೆ ಎಂದು ಜನ ಹೇಳುತ್ತಿದ್ದಾರೆ. ಶಿವಮೊಗ್ಗ ನಗರದಲ್ಲಿ ಹುಟ್ಟಿ ಬೆಳೆದರೂ ಈವರೆಗೆ ಇಂತಹ ಶಬ್ಧ ಕೇಳಿಲ್ಲವೆಂದರು.

ಇದನ್ನೂ ಓದಿ:ಶಿವಮೊಗ್ಗ: ಬಾಂಬ್‌ ನಿಷ್ಕ್ರಿಯ ದಳ ಆಗಮಿಸಿದ ಬಳಿಕವಷ್ಟೇ ಮುಂದಿನ ಕ್ರಮ

ಅಕ್ರಮ ಗಣಿಗಾರಿಕೆ ಎಲ್ಲಾ ಕಡೆ ಇದೆ. ಅಕ್ರಮ ಗಣಿಗಾರಿಕೆ ವಿರುದ್ಧ ನಾವು ಕ್ರಮ ತೆಗೆದುಕೊಂಡಿದ್ದೆವು, ಇನ್ನೂ ಮುಂದೆಯೂ ಕ್ರಮ ಕೈಗೊಳ್ಳಲಿದ್ದೇವೆ. ಆದರೆ ಸ್ಫೋಟಕ್ಕೆ ಕಾರಣವೇನು ಎಂದು ತಿಳಿಯಬೇಕಿದೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ಸ್ಫೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ, ತನಿಖೆಗೆ ಎಚ್ ಡಿಕೆ ಆಗ್ರಹ

Advertisement

ನಿನ್ನೆ ನಾನು ಊರಿನಲ್ಲಿ ಇರಲಿಲ್ಲ. ಬೆಂಗಳೂರಿನಿಂದ ಬಂದಿದ್ದೇನೆ. ನಮ್ಮನೆ ಕಿಟಕಿ ತೆಗೆದುಕೊಂಡಿತ್ತು. ಆಮೇಲೆ ಅನುಭವಕ್ಕೆ ಬಂದಿದೆ. ಸ್ಫೋಟದಲ್ಲಿ ಬಿಹಾರ ಮೂಲದ ನಾಲ್ಕು ಜನ ಸಾವನ್ನಪ್ಪಿರುವುದು ತಿಳಿದುಬಂದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next