Advertisement

ಸಚಿವರ ಈಶ್ವರಪ್ಪನವರ ಕಾಲಿಗೆ ಬಿದ್ದ ತಹಶೀಲ್ದಾರ್, ರೆವೆನ್ಯೂ ಇನ್ಸ್‌ಪೆಕ್ಟರ್

08:00 PM May 01, 2020 | keerthan |

ಶಿವಮೊಗ್ಗ: ಇಲ್ಲಿನ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಜನಸಂದಣಿಯ ಎದುರೇ ಸಚಿವ ಕೆ ಎಸ್ ಈಶ್ವರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಘಟನೆ ಶುಕ್ರವಾರ ನಡೆದಿದೆ.

Advertisement

ಶಿವಮೊಗ್ಗದ ನೂತನ ತಹಶೀಲ್ದಾರ್ ನಾಗರಾಜ್ ಮತ್ತು ರೆವಿನ್ಯೂ ಇನ್ಸ್‌ಪೆಕ್ಟರ್ ವಿಜಯ ಕುಮಾರ್ ಸಾರ್ವಜನಿಕರ ಎದುರಿನಲ್ಲೇ ಸಚಿವರ ಕಾಲಿಗೆರಗಿದ ಪ್ರಸಂಗ ನಡೆಯಿತು.

ಶಿವಮೊಗ್ಗದ ನೂತನ ತಹಶೀಶಿಲ್ದಾರ್ ನಾಗರಾಜ್ ಗುರುವಾರ ಸಂಜೆಯಷ್ಷೇ ಅಧಿಕಾರ ಸ್ವೀಕರಿಸಿದ್ದರು. ಈ ಮೊದಲು ಶಿವಮೊಗ್ಗದ ತಹಶೀಲ್ದಾರ್ ಆಗಿದ್ದ ಗಿರೀಶ್ ವರ್ಗಾವಣೆ ಆಗಿದ್ದರು. ಈ ಮೊದಲು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ತಹಶೀಲ್ದಾರ್ ಆಗಿದ್ದ ನಾಗರಾಜ್ ಈಗ ಶಿವಮೊಗ್ಗಕ್ಕೆ ವರ್ಗವಾಗಿ ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಇಂದು ಸಚಿವ ಈಶ್ವರಪ್ಪ ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ಧಾರೆ.

ತಹಶೀಲ್ದಾರ್ ಮತ್ತು ರೆವಿನ್ಯೂ ಇನ್ಸ್‌ಪೆಕ್ಟರ್ ವಿಜಯ ಕುಮಾರ್ ಅವರ ವರ್ತನೆ ಕಂಡು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next