Advertisement

ಬಂದರು ಕಾಮಗಾರಿ ತ್ವರಿತಕ್ಕೆ ಕೋಟ ಸೂಚನೆ

10:34 AM Jun 17, 2020 | mahesh |

ಮಂಗಳೂರು: ಬಂದರು ಇಲಾಖೆಯು ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಸಾಗರ ಮಾಲಾ ಯೋಜನೆಯಡಿ ಹಳೇ ಬಂದರಿನಲ್ಲಿ 65 ಕೋ.ರೂ. ವೆಚ್ಚದಲ್ಲಿ ಕೋಸ್ಟಲ್‌ ಬರ್ತ್‌ ನಿರ್ಮಾಣ, 29 ಕೋ.ರೂ. ವೆಚ್ಚದಲ್ಲಿ ಕ್ಯಾಪಿಟಲ್‌ ಡ್ರೆಜಿಂಗ್‌ ಕಾಮಗಾರಿ, 20 ಕೋ.ರೂ. ವೆಚ್ಚದಲ್ಲಿ ಬೆಂಗರೆ ಬದಿಯಲ್ಲಿ ಹೊಸ ಡ್ರೈಡಾಕ್‌ ನಿರ್ಮಾಣ ಕಾಮಗಾರಿ ನಡೆಯಲಿದೆ. ಇದರ ಟೆಂಡರ್‌ ಪ್ರಕ್ರಿಯೆಯನ್ನು ಶೀಘ್ರದಲ್ಲಿ ನಡೆಸಿ ಕಾಮಗಾರಿ ಕೂಡಲೇ ಕೈಗೆತ್ತಿಕೊಳ್ಳುವಂತೆ ಸಚಿವರು ಸೂಚಿಸಿದರು.

29.91 ಕೋ.ರೂ. ವೆಚ್ಚದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಯೋಜನೆಯಡಿ 25 ಕಾಮಗಾರಿಗಳು ನಡೆಯಲಿವೆ.ಎಂದು ಸಚಿವರು ತಿಳಿಸಿದರು.
ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಡೆಸುವಂತೆ ಸೂಚಿಸಿದ ಅವರು, ಕಳೆಪೆ ಕಾಮಗಾರಿ ಕಂಡುಬಂದಲ್ಲಿ ಅಂತಹ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಡಿಸಿ ಸಿಂಧೂ ಬಿ ರೂಪೇಶ್‌, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next