Advertisement

ಉತ್ತಮ ಚಿಕಿತ್ಸೆ ನೀಡದಿದ್ದರೆ ಕಠಿನ ಕ್ರಮದ ಎಚ್ಚರಿಕೆ:ವೆನ್ಲಾಕ್‌ಗೆ ಸಚಿವ ಕೋಟ ದಿಢೀರ್‌ ಭೇಟಿ

02:08 AM Jan 27, 2021 | Team Udayavani |

ಮಂಗಳೂರು: ಜಿಲ್ಲಾ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದಲ್ಲದೆ ಅವರೊಂದಿಗೆ ಸೌಹಾರ್ದದಿಂದ ನಡೆದುಕೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವೆನಾÉಕ್‌ ಆಸ್ಪತ್ರೆಯ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಲ್ಲಿನ ರೋಗಿಗಳ ಸಮಸ್ಯೆಯನ್ನು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

Advertisement

ರೋಗಿಗಳಿಗೆ ಇಲ್ಲಿನ ವೈದ್ಯರು ಹಾಗೂ ಸಿಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮುಂದಿನ ದಿನದಲ್ಲಿ ಈ ರೀತಿಯ ದೂರುಗಳು ಬರದಂತೆ ಕಾರ್ಯ ನಿರ್ವಹಿಸಬೇಕು. ಅಗತ್ಯವಿರುವ ಔಷಧ ಸಾಮಗ್ರಿ ಸೇರಿದಂತೆ ಚಿಕಿತ್ಸಾ ಪರಿಕರಗಳನ್ನು ಆಗಿಂದಾಗೆ ಟೆಂಡರ್‌ ಕರೆದು ದಾಸ್ತಾನುಗಳು ಇರುವಂತೆ ಎಚ್ಚರ ವಹಿಸಬೇಕು ಎಂದರು.

ಕಠಿನ ಕ್ರಮದ ಎಚ್ಚರಿಕೆ :

ಇಲ್ಲಿನ ಕೆಲವು ವೈದ್ಯರುಗಳು ಚಿಕಿತ್ಸೆಗೆ  ಬರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗೆ ಹೋಗಲು ತಿಳಿಸುತ್ತಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ಕಂಡು ಬಂದಲ್ಲಿ ಅಂತಹ ವೈದ್ಯರುಗಳ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಸ್ಪತ್ರೆಗೆ ಬರುವ ರೋಗಿಗಳನ್ನು ಪರೀಕ್ಷಿಸಿ ಔಷಧ ಮತ್ತು ಮಾತ್ರೆಗಳನ್ನು ಖಾಸಗಿ ಮೆಡಿಕಲ್‌ ಸೆಂಟರ್‌ನಲ್ಲಿ ಕೊಂಡುಕೊಳ್ಳಲು ಚೀಟಿ ಬರೆಯುತ್ತಾರೆ ಎಂಬ ಬಗ್ಗೆ ಕೇಳಿಬರುತ್ತಿದೆ. ಇದಕ್ಕೆ ಆಸ್ಪದ ನೀಡದೆ ಇಲ್ಲಿಯೇ ಉಚಿತವಾಗಿ ಔಷಧ ಮತ್ತು ಮಾತ್ರೆಗಳನ್ನು ವಿತರಿಸಬೇಕು ಎಂದರು.

Advertisement

ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ, ಡಿ. ವೇದವ್ಯಾಸ ಕಾಮತ್‌, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧಿಕ್ಷಕರಾದ ಸದಾಶಿವ ಶಾನುಭೋಗ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ರಾಮಚಂದ್ರ ಬಾಯರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next