Advertisement

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

11:18 PM Sep 16, 2024 | Team Udayavani |

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ನಿವಾಸಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೋಮವಾರ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಚಲುವರಾಜು ಪತ್ನಿ ಸಚಿವರ ಮುಂದೆ ಕಣ್ಣೀರು ಹಾಕಿ ರಕ್ಷಣೆ ಕೋರಿದರು.

Advertisement

ನನ್ನ ಪತಿ ಹಾಗೂ ನಮ್ಮ ಮನೆಗೆ ಭದ್ರತೆ ಕೊಡಿ ಎಂದು ಮನವಿ ಮಾಡಿಕೊಂಡರು.ಸಮಾಧಾನ ಪಡಿಸಿದ ಸಚಿವೆ, ಯಾವುದೇ ಭಯಪಡುವ ಆಗತ್ಯವಿಲ್ಲ ಧೈರ್ಯದಿಂದ ಇರಿ. ಸರಕಾರ ಸೂಕ್ತವಾದ ರಕ್ಷಣೆ ನೀಡಲಿದೆ ಎಂದು ಧೈರ್ಯ ತುಂಬುವ ಕೆಲಸ ಮಾಡಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಲಕ್ಷ್ಮೀ, ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದೇನೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next