Advertisement

Sand: ಮರಳು ಸಮಸ್ಯೆಗೆ ಶೀಘ್ರ ಪರಿಹಾರ- ವಿಧಾನಸಭೆಯಲ್ಲಿ ಸಚಿವ ಮಲ್ಲಿಕಾರ್ಜುನ್‌

12:51 AM Dec 09, 2023 | Team Udayavani |

ಬೆಳಗಾವಿ: ದಕ್ಷಿಣ ಕನ್ನಡ ಸಹಿತ ಕರಾವಳಿ ಜಿಲ್ಲೆಗಳ ಮರಳು ಸಮಸ್ಯೆಗೆ ಶೀಘ್ರ ಪರಿಹಾರ ಸೂತ್ರ ರೂಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹೇಳಿದರು.
ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋ ತ್ತರ ಕಲಾಪ ವೇಳೆ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಎತ್ತಿದ ಪ್ರಶ್ನೆಗೆ ಸಚಿವರು ಉತ್ತರಿಸಿ, ಕರಾವಳಿ ನಿಯಂತ್ರಣ ವಲಯ ಹೊರತು ಪಡಿಸಿ ನದಿ ಪಾತ್ರಗಳ ವ್ಯಾಪ್ತಿಯಲ್ಲಿ ಟೆಂಡರ್‌ ಮತ್ತು ಹರಾಜು ಮೂಲಕ 25 ಮರಳು ಗುತ್ತಿಗೆಗಳನ್ನು ಮಂಜೂರು ಮಾಡಲಾಗಿದೆ. ಇಲ್ಲಿ ಮರಳು ಗಣಿಗಾರಿಕೆ ನಡೆಸಿ ಮರಳನ್ನು ಸಾರ್ವಜನಿಕ ಮತ್ತು ಸರಕಾರಿ ಕಾಮಗಾರಿಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದರು.

Advertisement

ಇದಕ್ಕೆ ಆಕ್ಷೇಪಿಸಿದ ವೇದವ್ಯಾಸ ಕಾಮತ್‌, ಕರಾವಳಿಯಲ್ಲಿ ಮರಳು ಗಣಿಗಾರಿಕೆ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಬೇಕು ಎಂದರಲ್ಲದೆ, ಮರಳು ಸಾಗಾಟ ಮತ್ತು ತೆಗೆಯಲು ನಿರಾಕ್ಷೇಪಣಾ ಪತ್ರ ನೀಡಲು ಮೀನಾಮೇಷ ಎಣಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ಇದಕ್ಕೆ ಧ್ವನಿಗೂಡಿಸಿದ ಇತರ ಪಕ್ಷಗಳ ಸದಸ್ಯರು ಮರಳು ಸಮಸ್ಯೆಗೆ ಶೀಘ್ರ ಪರಿಹಾರ ನೀಡಿ ಎಂದು ಸಚಿವರನ್ನು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ಎಂ ಸ್ಯಾಂಡ್‌ ಘಟಕಗಳಿದ್ದು, ವಾರ್ಷಿಕ 3,36,400 ಮೆಟ್ರಿಕ್‌ ಟನ್‌ ಎಂ ಸ್ಯಾಂಡ್‌ ಉತ್ಪಾದಿಸಲು ಅವಕಾಶವಿದೆ. 2023ರಲ್ಲಿ 72,183 ಮೆಟ್ರಿಕ್‌ ಟನ್‌ ಎಂ ಸ್ಯಾಂಡ್‌ ಉತ್ಪಾದನೆಯಾಗಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ ನಿರಾಕ್ಷೇಪಣಾ ಪತ್ರಗಳನ್ನು ಕೂಡ ಶೀಘ್ರವೇ ನೀಡಿ, ಮರಳು ಸಮಸ್ಯೆ ಇತ್ಯರ್ಥ ಮಾಡುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next