Advertisement

ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ನಮ್ಮ ಸಿಎಂ: ಮುರುಗೇಶ್ ನಿರಾಣಿ

12:14 PM May 23, 2021 | Team Udayavani |

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ. ಇನ್ನೂ ಎರಡು ವರ್ಷ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ಸಿಎಂ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತ ಉತ್ತಮವಾಗಿದೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ. ಮುಂದಿನ ಚುನಾವಣೆ ಕೂಡಾ ಯಡಿಯೂರಪ್ಪನವರ ನೇತೃತ್ವದಲ್ಲೇ ನಡೆಯಲಿದೆ ಎಂದರು.

ಇದನ್ನೂ ಓದಿ:ರೆಮ್ ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ತಡೆಯಲು ಸರ್ಕಾರದಿಂದ ಹೊಸ ಯೋಜನೆ

ಆಕ್ಸಿಜನ್ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ. ನಮ್ಮಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಇದೆ. ಅದನ್ನು ಶೇಖರಣೆ ಮಾಡಲು ಕಂಟೇನರ್ ಗಳ ಕೊರತೆಯಿದೆ. ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. ಕೇಂದ್ರದಿಂದಲೂ ಆಕ್ಸಿಜನ್ ಪೂರೈಕೆ ಆಗುತ್ತಿದೆ. ಸಿಲಿಂಡರ್‍ಗಳ ಕೊರತೆಯಿಂದ ಸಮಸ್ಯೆಯಾಗುತ್ತಿದೆ ಎಂದರು.

ಗುಲ್ಬರ್ಗಾದಲ್ಲಿ ಪ್ರತಿನಿತ್ಯ 500 ಕಂಟೇನರ್ ತಯಾರಿಸುವ ಕಾರ್ಯ ನಡೆಯುತ್ತಿದೆ. ಶೀಘ್ರವೇ ರಾಜ್ಯದಲ್ಲಿ ಆಕ್ಸಿಜನ್ ಸಿಲಿಂಡರ್ ಗಳ ಕೊರತೆ ನೀಗಲಿದೆ ಎಂದು ಮೈಸೂರಿನಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next