Advertisement

ಗಡಿಭಾಗದ ಚೆಕ್‌ಪೋಸ್ಟ್‌ಗೆ ಸಚಿವ ನಾಗೇಶ್‌ ಭೇಟಿ

01:43 PM Apr 08, 2020 | Suhan S |

ಬಂಗಾರಪೇಟೆ: ಕೋಲಾರ ಜಿಲ್ಲೆ ರಾಜ್ಯದ ಗಡಿಭಾಗದಲ್ಲಿರುವುದರಿಂದ ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿ ಭಾಗಗಳಲ್ಲಿ ಪೊಲೀಸ್‌ ಇಲಾಖೆಯು ಹೊರಗಿನವರು ಬರದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ನಾಗೇಶ್‌ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದರು.

Advertisement

ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿಭಾಗದಲ್ಲಿರುವ ಬೂದಿಕೋಟೆ ಹೋಬಳಿಯ ಮರಾಠಹೊಸಹಳ್ಳಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಅವರು ಮಾತನಾಡಿದರು. ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಕೋಲಾರ ಉಪವಿಭಾಗಾಧಿಕಾರಿ ವಿ.ಸೋಮಶೇಖರ್‌, ಕೆಜಿಎಫ್ ಪೊಲೀಸ್‌ ವರಿಷ್ಠಾಧಿಕಾರಿ ಮಹಮ್ಮದ್‌ ಸುಜೀತಾ, ಡಿವೈಎಸ್‌ಪಿ ಉಮೇಶ್‌, ತಹಶೀಲ್ದಾರ್‌ ಕೆ.ಬಿ.ಚಂದ್ರಮೌಳೇಶ್ವರ್‌, ತಾಪಂ ಇಒ ಎನ್‌.ವೆಂಕಟೇಶಪ್ಪ, ಸರ್ಕಲ್‌ ಇನ್ಸ್‌ಪೆಕ್ಟರ್‌ ಬಿ.ಎನ್‌. ಶ್ರೀಕಂಠಯ್ಯ, ಗುಲ್ಲಹಳ್ಳಿ ಗ್ರಾಪಂ ಪಿಡಿಒ ಚಿನ್ನಪ್ಪ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next