Advertisement

ಲಾಕ್‌ಡೌನ್‌ ಕಟ್ಟುನಿಟ್ಟು ಜಾರಿಗೆ ಸಚಿವರ ಸೂಚನೆ

11:50 AM Jul 17, 2020 | Suhan S |

ಬೀದರ: ಕೋವಿಡ್ ಸೋಂಕು ಹರಡುವಿಕೆಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್‌ಡೌನ್‌ ಯಶಸ್ವಿಗೊಳಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಸೂಚನೆ ನೀಡಿದ್ದಾರೆ.

Advertisement

ಕ್ವಾರಂಟೈನ್‌ನಲ್ಲಿರುವ ಸಚಿವರು, ದೂರವಾಣಿ ಮೂಲಕ ಜಿಲ್ಲಾಧಿಕಾರಿ, ಎಸ್‌ಪಿ ಅವರನ್ನು ಸಂಪರ್ಕಿಸಿ ಲಾಕ್‌ಡೌನ್‌ ಕುರಿತಂತೆ ಮಾಹಿತಿ ಪಡೆದರಲ್ಲದೇ ಕಟ್ಟುನಿಟ್ಟು ಜಾರಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು. ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘನೆ ಮಾಡುವವರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲು ಸಹ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿಯಲ್ಲಿರುವ ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಜನರ ಹಿತದೃಷ್ಟಿಯಿಂದ ಲಾಕ್‌ಡೌನ್‌ ಯಶಸ್ವಿಯಾಗಬೇಕಿದೆ. ಪ್ರತಿಯೊಬ್ಬರೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ವೈರಸ್‌ ವಿರುದ್ಧ ಜಯ ಸಾಧಿಸುವ ಅಭಿಯಾನಕ್ಕೆ ಕೈಜೋಡಿಸಬೇಕು. ಜನರು ಎಲ್ಲ ನಿಯಮಗಳನ್ನು ಅಳವಡಿಸಿಕೊಂಡಾಗ ಕೊರೊನಾ ಕಟ್ಟಿಹಾಕುವುದು ಸುಲಭ ಎಂದು ಸಚಿವರು ಮನವಿ ಮಾಡಿದ್ದಾರೆ.

ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಹಾಗೂ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರು ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಯ ಅವಲೋಕನ ನಡೆಸಿ, ಯಾರಿಗೂ ಯಾವುದೇ ತೊಂದರೆಯಾಗದಂತೆ ತಿಳಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವವರಿಂದ ಯಾವುದೇ ದೂರುಗಳು ಬರದಂತೆ ವ್ಯವಸ್ಥೆ ಮಾಡಲು ಬ್ರಿಮ್ಸ್‌ ನಿರ್ದೇಶಕರಿಗೂ ಸಚಿವರು ತಾಕೀತು ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next