Advertisement

ಪ್ರಾಥಮಿಕ ಶಿಕ್ಷಣ ಸಚಿವರ ನೇಮಿಸಿ

11:11 AM Jan 26, 2019 | Team Udayavani |

ತುಮಕೂರು: ಪ್ರಾಥಮಿಕ ಶಿಕ್ಷಣ ಸಚಿವರ ನೇಮಕ ಸೇರಿದಂತೆ ವಿವಿಧ ಶೈಕ್ಷಣಿಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕ್ಯಾಂಪಸ್‌ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿ ಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Advertisement

ಸಚಿವರಿಲ್ಲದೇ ಶಿಕ್ಷಣ ಇಲಾಖೆ ನಿರ್ಜೀವವಾಗಿದ್ದು, ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಪರೀಕ್ಷೆಗಳು ಹತ್ತಿರವಾಗುತ್ತಿದ್ದರೂ, ಶಿಕ್ಷಣ ಸಚಿವರನ್ನು ನೇಮಿಸದೇ ರಾಜ್ಯ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದ್ದು, ಕಳೆದ ಮೂರು ವರ್ಷಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ. ಈ ಬಾರೀ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಇಲಾ ಖೆಗೆ ಸಚಿವರಿಲ್ಲದಂಥ ಸ್ಥಿತಿ ನಿರ್ಮಾಣವಾಗಿದೆ ಎಂದು ಕ್ಯಾಂಪಸ್‌ ಫ್ರಂಟ್ ಆಫ್ ಇಂಡಿಯಾರಾಜ್ಯಾಧ್ಯಕ್ಷ ಮಹ ಮ್ಮದ್‌ ತಪ್ಸೀರ್‌ ಅಸಮಾಧಾನ ವ್ಯಕ್ತಪಡಿ ಸಿದರು.

ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸಬೇಕು, ಪ್ರಶ್ನೆಪತ್ರಿಕೆಗಳು ಸೋರಿಕೆ ಯಾಗದಂತೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸೈಕಲ್‌ ವಿತರಣೆಯಲ್ಲಿ ಆಗಿರುವ ಅವ್ಯವಸ್ಥೆ ಸರಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡ ಲಾಯಿತು. ಪ್ರತಿಭಟನೆಯಲ್ಲಿ ಕ್ಯಾಂಪಸ್‌ ಫ್ರಂಟ್ ಆಫ್ ಇಂಡಿಯಾದ ಕಾರ್ಯ ಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next