Advertisement

ಅಂಜನಾದ್ರಿ ಬೆಟ್ಟಕ್ಕೆ ಸಚಿವ ಗೋಯೆಲ್‌ ಭೇಟಿ

07:20 AM Dec 26, 2018 | Team Udayavani |

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌ ಭೇಟಿ ನೀಡಿ, ಆಂಜನೇಯ ಸ್ವಾಮಿಯ ದರ್ಶನ ಪಡೆದರು. ಕೇಂದ್ರ ಸಚಿವರ ಜತೆ ಕಾಂಗ್ರೆಸ್‌ ಶಾಸಕ ಆನಂದ ಸಿಂಗ್‌ ಕುಟುಂಬ ವರ್ಗದವರೂ ಅಂಜನಾದ್ರಿ ಕಿಷ್ಕಿಂದಾ ಪ್ರದೇಶಕ್ಕೆ ಭೇಟಿ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆ ವೇಳೆ ಹೊಸಪೇಟೆ (ವಿಜಯನಗರ) ಕಾಂಗ್ರೆಸ್‌ ಶಾಸಕ ಆನಂದಸಿಂಗ್‌ ಅವರಿಗೆ ಸಚಿವ ಸ್ಥಾನ ಲಭಿಸದಿರುವುದರಿಂದ ಆನಂದಸಿಂಗ್‌ ಮುನಿಸಿಕೊಂಡಿದ್ದು, ಬಿಜೆಪಿ ಸಖ್ಯ ಬೆಳೆಸುವ ಅನುಮಾನವಿದೆ. ರೈಲ್ವೆ ಸಚಿವ ಗೋಯೆಲ್‌ ಜತೆ ಆನಂದ ಸಿಂಗ್‌ ಕುಟುಂಬ ಕಾಣಿಸಿಕೊಂಡಿರುವುದು ಈ ಅನುಮಾನಕ್ಕೆ ಪುಷ್ಟಿ ನೀಡಿದೆ. 

Advertisement

ಶಾಸಕ ಪರಣ್ಣ ಮುನವಳ್ಳಿ ರೈಲ್ವೆ ಸಚಿವರನ್ನು ಸ್ವಾಗತಿಸಿದರು. ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಗೋಯೆಲ್‌, ಕೇಂದ್ರದ ಮಹತ್ವಾಕಾಂಕ್ಷೆಯ ಶ್ರೀರಾಮ ಸರ್ಕ್ನೂಟ್‌ ಯೋಜನೆಯಲ್ಲಿ ಹಂಪಿ ಕಿಷ್ಕಿಂದಾ ಅಂಜನಾದ್ರಿ ಪರ್ವತ ಪ್ರದೇಶ ಸೇರ್ಪಡೆಯಾಗಿದ್ದು, ಮುಂಬರುವ ದಿನಗಳಲ್ಲಿ ಅಂಜನಾದ್ರಿ ಪರ್ವತ, ಪಂಪಾ ಸರೋವರ ಪ್ರದೇಶಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next