Advertisement

ಲಾಕ್ ಡೌನ್ ಗೆ ಸ್ಪಂದಿಸುವಂತೆ ಸಚಿವ ಪ್ರಭು ಚವ್ಹಾಣ ಮನವಿ

01:38 PM Mar 30, 2020 | keerthan |

ಬೀದರ್: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಲಾಕ್ ಡೌನ್ ಗೆ ಸ್ಪಂದಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಜಾಗೃತಿ ಆರಂಭಿಸಿದ್ದಾರೆ.

Advertisement

ಮಹಾರಾಷ್ಟ್ರಕ್ಕೆ ಹೊಂದಿ ಕೊಂಡಿರುವ  ಕಮಲನಗರ ಗಡಿಯಲ್ಲಿ ಸಚಿವ ಚವ್ಹಾಣ ರಸ್ತೆ ಮೇಲೆ ಸಂಚರಿಸುತ್ತಿರುವ ಪ್ರಯಾಣಿಕರಿಗೆ ಕೈಮುಗಿದು ಮನೆಯಲ್ಲೆ ಇರುವಂತೆ ಮನವಿ ಮಾಡುತ್ತಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಆಹಾರದ ಅಭಾವ ಎದುರಿಸುತ್ತಿರುವವರನ್ನು ಗುರುತಿಸಿ ಅಕ್ಕಿ,ಬೇಳೆ, ಎಣ್ಣೆ ಮತ್ತಿತರ ಅವಶ್ಯ ವಸ್ತುಗಳನ್ನು ವಿತರಿಸಿದ್ದಾರೆ.

ಗಡಿಭಾಗದ ತಪಾಸಣಾ ಕೇಂದ್ರಗಳೆಗೆ ಭೇಟಿ ನೀಡಿ ಸಿಬ್ಬಂದಿಗಳಿಗೆ ಆಗುತ್ತಿರುವ   ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next