Advertisement

ಈ ಅಧಿವೇಶನದಲ್ಲೇ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ: ಪ್ರಭು ಚವ್ಹಾಣ್

11:55 AM Dec 07, 2020 | keerthan |

ಬೆಂಗಳೂರು: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯದ ಮಾದರಿಯನ್ನು ಪರಿಗಣಿಸಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ಈ ಅಧಿವೇಶನದಲ್ಲೇ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ ಮಾಡಲಿದ್ದೇವೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು.

Advertisement

ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜೊತೆಯೂ ಮಾತನಾಡಿದ್ದೇನೆ. ಅಲ್ಲಿ ಅವರು ಏನು ಮಾಡಿದ್ದಾರೋ ಅದನ್ನು ವಿವರಿಸಿದ್ದಾರೆ. ಗುಜರಾತ್, ಮಧ್ಯಪ್ರದೇಶ ರಾಜ್ಯದ ಕಾಯ್ದೆಗಳ ಬಗ್ಗೆಯೂ ಪರಿಶೀಲನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಭಾರತ್ ಬಂದ್, ಆನ್ ಲೈನ್ ತರಗತಿಯೂ ಬಂದ್!

ಕಾಯ್ದೆ ಬಗ್ಗೆ ಕಾಂಗ್ರೆಸ್ ನವರು ಏನು ಬೇಕಾದರೂ‌ ಹೇಳಲಿ. ಅವರು ವಿರೋಧ ಪಕ್ಷದವರು, ಹಾಗಾಗಿ ಹೇಳಲಿ. ಆದರೆ ಈ ಅಧಿವೇಶನದಲ್ಲೇ ಬಲವಾದ ಕಾನೂನು ತರುತ್ತೇವೆ ಎಂದು ಪ್ರಭು ಚವ್ಹಾಣ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next